ಜಿಲ್ಲೆಗಳು

ಸಿದ್ದರಾಮಯ್ಯ ಆಪ್ತ ಯರಂಬಾಡಿ ಹುಚ್ಚಯ್ಯ JDS ಗೆ ಸೇರ್ಪಡೆ

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ.

ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಮಿಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳು ಬಂದಿರಲಿಲ್ಲ ಇಂದು ಈ ಭಾಗದ ಪ್ರಮುಖ ಮುಖಂಡರಾದ ಯರಂಬಾಡಿ ಹುಚ್ಚಯ್ಯ ಹಾಗೂ ಪ್ರಮುಖ ನಾಯಕರುಗಳು ಜಾದಳ ಸೇರ್ಪಡೆಯಾಗಿರುವುದು ಈ ಭಾಗದಲ್ಲಿ ನಮಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಾರಿ ಹನೂರು ಕ್ಷೇತ್ರದಲ್ಲಿ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ನಿಜವೋ ಹಾಗೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾದಳ ಜಯಭೇರಿ ಬಾರಿಸುವುದು ನೂರಕ್ಕೆ ನೂರು ಸತ್ಯ. ಈ ಭಾಗದ ಜನರು ನನ್ನ ಸಂಘಟನೆ ಹಾಗೂ ಕಷ್ಟ ಸುಖಗಳಲ್ಲಿ ಸ್ಪಂದಿಸುತ್ತಿರುವುದಕ್ಕೆ ಮತದಾರರು ಈ ಬಾರಿ ನನ್ನ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಗಾಜನೂರು ಮಾದೇವ, ಬೋಪ್ಪನ್ ಮಾದೇವ, ವಡ್ಡರಸಿ ಸೇರಿದಂತೆ ಮುಂತಾದವರು ಕಾಂಗ್ರೆಸ್ ತೊರೆದು ಜಾದಳ ಸೇರ್ಪಡೆಯಾದರು.

andolanait

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

9 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

11 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

11 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

11 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

11 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

11 hours ago