ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸಂಬಂಧವಾಗಿ ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೆಟ್ ಬಳಿ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಿದ್ದರಾಮಯ್ಯ ಸಾಹೇಬರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಸಾವಿರಾರು ಜನರ ಸಮ್ಮುಖದಲ್ಲಿ ರಸ್ತೆ ತಡೆ ನಡೆಸಲಾಯಿತು, ಆನಂತರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…