ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸಂಬಂಧವಾಗಿ ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೆಟ್ ಬಳಿ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಿದ್ದರಾಮಯ್ಯ ಸಾಹೇಬರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಸಾವಿರಾರು ಜನರ ಸಮ್ಮುಖದಲ್ಲಿ ರಸ್ತೆ ತಡೆ ನಡೆಸಲಾಯಿತು, ಆನಂತರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…