ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸಿದ್ದರಾಮಯ್ಯ ಮನೆಗೆ ಹೋಗುವುದು ಖಚಿತ. ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸೋಲು ಖಚಿತ ಎನ್ನುವುದು ಅರಿವಾಗಿರುವುದರಿಂದಲೇ ಇಂತಹ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಅತನಾಡಿದ ಅವರು, ‘ನಾವು ಸುಮ್ಮನೇ ಕುಳಿತರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ’ ಎಂಬ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಮನೆಗೆ ಹೋಗುವ ಕಾರ್ಯಕ್ರಮ ಇದೆ. ಹೀಗಾಗಿಯೇ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಚಾಯಿಸಿದರು.
ಗುಜರಾತ್ ಚುನಾವಣೆಯ ನಂತರ ಸಹಜವಾಗಿಯೇ ಕರ್ನಾಟಕದಲ್ಲಿ ಚುನಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ನಾವು ಸಂಘಟನೆ ದೃಷ್ಟಿಯಿಂದ ಎಲ್ಲ ತಯಾರಿಯನ್ನೂ ನಡೆಸುತ್ತಿದ್ದೇವೆ.
ಈ ಬಾರಿ ಹಳೇ ಮೈಸೂರು ಭಾಗದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ ಎಂದು ತಿಳಿಸಿದರು.
ಅವಧಿಗೂ ಮುನ್ನವೇ ಚುನಾವಣೆ ಬರಲಿದೆೆಯೇ’ ಎಂಬ ಪ್ರಶ್ನೆಗೆ, ‘ಇಂಥವೆಲ್ಲ ನಿಮಗೆ ಯಾರು ಹೇಳುತಾರ್ರೀ’ ಎಂದು ಗರಂ ಆಗಿ ಕಾರಿನತ್ತ ತೆರಳಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮಹಾಪೌರ ಶಿವಕುಮಾರ್ ಹಾಜರಿದ್ದರು.
ಇದಕ್ಕೂ ಮುನ್ನ ಜಿಲ್ಲಾಡಳಿತದ ಪರವಾಗಿ ಮುಖ್ಯಮಂತ್ರಿಗಳನ್ನು ಸ್ವಾಗತಿಸಲಾಯಿತು. ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ ಗೌಡ, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ಮೈಲ್ಯಾಕ್ ಅಧ್ಯಕ್ಷ ಆರ್.ರಘು, ಉಪ ಮಹಾಪೌರರಾದ ಡಾ.ಜಿ.ರೂಪಾ, ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಡಿಸಿಪಿಗಳಾದ ಪ್ರದೀಪ್ ಗುಂಟಿ, ಎಂ.ಎಸ್.ಗೀತಾ ಪ್ರಸನ್ನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಮೈಸೂರು ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್, ಮಾಜಿ ಮಹಾಪೌರ ಎಸ್.ಸತೀಶ್ ಸ್ವಾಮಿ ಮೊದಲಾದವರು ಸ್ವಾಗತಿಸಿದರು.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…