ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ.
79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಜಾನುವಾರುಗಳಿಗೆ ಈ ಯೋಜನೆಯಿಂದ ಭಾರೀ ಅನುಕೂಲವಾಗಲಿದೆ. ಇನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ತಾಲೂಕಿನ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಮಂಜೂರು ಮಾಡಿದ್ದು ಕೂಡ ನಮ್ಮ ಸರ್ಕಾರವೇ ಹೊರತು ಇದು ಬಿಜೆಪಿಯ ಕೊಡುಗೆಯಲ್ಲ, ಯೋಜನೆ ಮಂಜೂರಾಗಲು ಶಾಸಕರಾಗಿದ್ದ ಕೆ. ವೆಂಕಟೇಶ್ ಕಾರಣ ಎಂದು ಹೇಳಿಕೆ ನೀಡಿದರು.
ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಪ್ರಮಾಣವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ 79 ಹಳ್ಳಿಗಳ 93000 ಜನರಿಗೆ ಅನುಕೂಲವಾಗಲಿದೆ. ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು, 56 ಸಾವಿರ ಕೋಟಿ ಖರ್ಚು ಮಾಡಿದೆವು. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಒಂದು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ ಎಂದು ಹೇಳಿ ಮಾಡಲಿಲ್ಲ ಎಂದೂ ಸಹ ಸಿದ್ದರಾಮಯ್ಯ ಹೇಳಿದರು.
ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಕಳೆದ…
ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…
ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…
ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…
ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…
ಪಂಜುಗಂಗೊಳ್ಳಿ ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…