ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ.
79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಜಾನುವಾರುಗಳಿಗೆ ಈ ಯೋಜನೆಯಿಂದ ಭಾರೀ ಅನುಕೂಲವಾಗಲಿದೆ. ಇನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ತಾಲೂಕಿನ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಮಂಜೂರು ಮಾಡಿದ್ದು ಕೂಡ ನಮ್ಮ ಸರ್ಕಾರವೇ ಹೊರತು ಇದು ಬಿಜೆಪಿಯ ಕೊಡುಗೆಯಲ್ಲ, ಯೋಜನೆ ಮಂಜೂರಾಗಲು ಶಾಸಕರಾಗಿದ್ದ ಕೆ. ವೆಂಕಟೇಶ್ ಕಾರಣ ಎಂದು ಹೇಳಿಕೆ ನೀಡಿದರು.
ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಪ್ರಮಾಣವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ 79 ಹಳ್ಳಿಗಳ 93000 ಜನರಿಗೆ ಅನುಕೂಲವಾಗಲಿದೆ. ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು, 56 ಸಾವಿರ ಕೋಟಿ ಖರ್ಚು ಮಾಡಿದೆವು. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಒಂದು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ ಎಂದು ಹೇಳಿ ಮಾಡಲಿಲ್ಲ ಎಂದೂ ಸಹ ಸಿದ್ದರಾಮಯ್ಯ ಹೇಳಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…