ಜಿಲ್ಲೆಗಳು

ಮೈಸೂರು: 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿದ್ದರಾಮಯ್ಯ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುತ್ತಿನಮುಳಸೋಗೆ ಗ್ರಾಮದ ಸಮೀಪ ಕಾವೇರಿ ನದಿಯಿಂದ ನೀರೆತ್ತಿ ಕೆರೆ ಕಟ್ಟೆಗಳನ್ನು ಭರ್ತಿ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಜನವರಿ 24 ) ಚಾಲನೆ ನೀಡಿದ್ದಾರೆ.

79 ಗ್ರಾಮಗಳ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದ್ದು, ಸುತ್ತಮುತ್ತಲಿನ ಗ್ರಾಮಗಳ ರೈತರು ಹಾಗೂ ಜಾನುವಾರುಗಳಿಗೆ ಈ ಯೋಜನೆಯಿಂದ ಭಾರೀ ಅನುಕೂಲವಾಗಲಿದೆ. ಇನ್ನು ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಪಿರಿಯಾಪಟ್ಟಣ ತಾಲೂಕಿನ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ 2017ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ. ಮಂಜೂರು ಮಾಡಿದ್ದು ಕೂಡ ನಮ್ಮ ಸರ್ಕಾರವೇ ಹೊರತು ಇದು ಬಿಜೆಪಿಯ ಕೊಡುಗೆಯಲ್ಲ, ಯೋಜನೆ ಮಂಜೂರಾಗಲು ಶಾಸಕರಾಗಿದ್ದ ಕೆ. ವೆಂಕಟೇಶ್‌ ಕಾರಣ ಎಂದು ಹೇಳಿಕೆ ನೀಡಿದರು.

ಕುಡಿಯುವ ನೀರು ಒದಗಿಸಲು ಹಾಗೂ ಅಂತರ್ಜಲ ಪ್ರಮಾಣವನ್ನು ಹೆಚ್ಚಿಸಲು ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಇದರಿಂದ 79 ಹಳ್ಳಿಗಳ 93000 ಜನರಿಗೆ ಅನುಕೂಲವಾಗಲಿದೆ. ನೀರಾವರಿಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು, 56 ಸಾವಿರ ಕೋಟಿ ಖರ್ಚು ಮಾಡಿದೆವು. ನುಡಿದಂತೆ ನಡೆದಿದ್ದೇವೆ. ಆದರೆ ಬಿಜೆಪಿಯವರು ಒಂದು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ ಎಂದು ಹೇಳಿ ಮಾಡಲಿಲ್ಲ ಎಂದೂ ಸಹ ಸಿದ್ದರಾಮಯ್ಯ ಹೇಳಿದರು.

andolana

Recent Posts

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

51 mins ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

2 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

3 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

8 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

10 hours ago

ಮುಂಬೈನಲ್ಲಿ ನೀರಿಗೆ ಭಾರೀ ಬಿಕ್ಕಟ್ಟು: ಕಟ್ಟಡ ಕಾಮಗಾರಿಗಳಿಗೆ ನೀರು ಬಂದ್‌

ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…

11 hours ago