ಜಿಲ್ಲೆಗಳು

ಸಿದ್ದರಾಮಯ್ಯ ಕೊಡಗಿನ ಜನರ ಕಷ್ಟ ಕೇಳಿದ್ದರೆ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ : ಎಸ್.ಟಿ ಸೋಮಶೇಖರ್.

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ  ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ.  ಕೊಡಗಿನ‌ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ  ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ  ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.

ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ,  ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

6 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

11 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

11 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

11 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

11 hours ago