ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್ ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ. ಕೊಡಗಿನ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.
ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ, ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.
ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…
ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…
ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಡಿಸೆಂಬರ್.25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್ ಇವೆಂಟ್ ಕಾರ್ಯಕ್ರಮದಲ್ಲಿ ಸುದೀಪ್…
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ…
ಕೊಡಗಿನ ಖ್ಯಾತಿ ಹೆಚ್ಚಿಸುವಲ್ಲಿ ಕ್ರೀಡಾಪಟುಗಳ ಕೊಡುಗೆ ಅಪಾರ: ಸುಜಾ ಕುಶಾಲಪ್ಪ ಪೊನ್ನಂಪೇಟೆ: ಕೊಡಗು ಜಿಲ್ಲೆ ರಾಷ್ಟ್ರಮಟ್ಟದಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಎಲ್ಲ…