ಜಿಲ್ಲೆಗಳು

ಸಿದ್ದರಾಮಯ್ಯ ಕೊಡಗಿನ ಜನರ ಕಷ್ಟ ಕೇಳಿದ್ದರೆ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ : ಎಸ್.ಟಿ ಸೋಮಶೇಖರ್.

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ  ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ.  ಕೊಡಗಿನ‌ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ  ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ  ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.

ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ,  ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.

andolanait

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

8 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

8 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

9 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

9 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

11 hours ago