ಜಿಲ್ಲೆಗಳು

ಸಿದ್ದರಾಮಯ್ಯ ಕೊಡಗಿನ ಜನರ ಕಷ್ಟ ಕೇಳಿದ್ದರೆ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ : ಎಸ್.ಟಿ ಸೋಮಶೇಖರ್.

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್  ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ  ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ.  ಕೊಡಗಿನ‌ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ  ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ  ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.

ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ,  ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago