ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಸ್.ಟಿ ಸೋಮಶೇಖರ್ ತಮ್ಮ ಹೇಳಿಕೆಯನ್ನು ನೀಡಿದ್ದು ಕೊಡಗಿನಲ್ಲಿ ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದ ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ಗಾಂಧಿ ಹತ್ಯೆಯ ವಿಚಾರವೇ ಬೇರೆ ಮೊಟ್ಟೆ ಎಸೆದ ಪ್ರಕರಣವೇ ಬೇರೆ, ಕೊಡಗು ಪ್ರವಾಹದಿಂದ ತತ್ತರಿಸಿದ್ದಾಗ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಇರೋ ಕಾರಣಕ್ಕೆ ಕೊಡಗಿನ ಜನ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗಿನ ಪ್ರವಾಹದ ವೇಳೆ ಸಿದ್ದರಾಮಯ್ಯ ಅಲ್ಲಿಗೆ ಹೋಗಿ ಜನರ ಕಷ್ಟ ಕೇಳಿದ್ದರೆ ಜನ ಅವರ ಮೇಲೆ ಮೊಟ್ಟೆ ಎಸೆಯುತ್ತಿರಲಿಲ್ಲ. ಕೊಡಗಿನ ಜನ ಕಷ್ಟದಲ್ಲಿದ್ದಾಗ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮೋತ್ಸದ ಸುಖದ ಸುಪ್ಪತ್ತಿಗೆಯಲ್ಲಿ ಮೈ ಮರೆತಿದ್ದರು. ಕಷ್ಟ ಕಾಲದಲ್ಲಿ ನಮ್ಮ ಬಳಿಗೆ ಬರಲಿಲ್ಲ.ಈಗ ಬಂದಿದ್ದಾರೆ ಎಂದು ಜನ ಆಕ್ರೋಶದಲ್ಲಿ ಮೊಟ್ಟೆ ಎಸೆದಿದ್ದಾರೆ ಎಂದು ಪ್ರಕರಣವನ್ನು ಸಮರ್ಥಿಸಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕ ಅವರಿಗೆ ಅವರದೇ ಆದ ಸ್ಥಾನಕ್ಕೆ ಗೌರವ ತೂಕವಿದೆ.
ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರು ಮಾತನಾಡುವ ಮಾತುಗಳಲ್ಲಿ ಬಹಳ ತೂಕವಿರುತ್ತಿತ್ತು ಆದರೆ ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಬರೀ ವಿವಾದಗಳ ಮಾತುಗಳನ್ನೇ ಮಾತನಾಡುತ್ತಿದ್ದಾರೆ. ಎಂದರು.
ಮುಂದುವರಿದು, ಹತ್ಯೆ ಮಾಡುವಂತಹ ವಾತಾವರಣ ನಮ್ಮ ಕರ್ನಾಟಕದಲ್ಲಿ ಇಲ್ಲ, ಕರ್ನಾಟಕ ಪೊಲೀಸರು ಇಡೀ ದೇಶದಲ್ಲಿ ಬಲಯುತವಾಗಿದೆ. ಯಾರೂ ಅಭದ್ರತೆ ಬಗ್ಗೆ ಚಿಂತೆ ಮಾಡುವುದು ಬೇಡ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…