ಜಿಲ್ಲೆಗಳು

ವರಿಷ್ಠರು ಸೂಚಿಸಿದರೆ ವರುಣದಲ್ಲೇ ಸ್ಪರ್ಧೆ: ಸಿದ್ದು

ಇಂಡವಾಳು ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿದ ವಿಪಕ್ಷ ನಾಯಕ

ತಿ.ನರಸೀಪುರ: ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣದಲ್ಲಿಯೇ ಕಣಕ್ಕಿಳಿಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ತಾಲ್ಲೂಕಿನ ವರುಣ ವಿಧಾನಸಭಾ ಇಂಡವಾಳು ಗ್ರಾಮದಲ್ಲಿ ಶುಕ್ರವಾರ ಸಂಜೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು ನನ್ನ ಸ್ಪರ್ಧೆಯ ಕ್ಷೇತ್ರದ ಆಯ್ಕೆಯನ್ನು ಹೈಕಮಾಂಡ್‌ಗೆ ಬಿಟ್ಟಿದ್ದೇನೆ. ಕ್ಷೇತ್ರದ ಮತದಾರರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಪುನರುಚ್ಚರಿಸಿದರು.
ದೇಶದಲ್ಲೇ ಪ್ರಥಮ ಬಾರಿಗೆ ಗುತ್ತಿಗೆಯಲ್ಲಿ ಮೀಸಲಾತಿಯನ್ನು ಕಲ್ಪಿಸಿದವು. ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಾಗಮೋಹನದಾಸ್ ನೇತೃತ್ವದ ಸಮಿತಿ ರಚನೆ ಮಾಡಿದ್ದೆವು. ಇಂತಹ ಉತ್ತಮ ಕೆಲಸವನ್ನು ಮಾಡಿ ಎಂದರೆ, ಪುಕ್ಕಟೆ ಪ್ರಚಾರ ಪಡೆಯುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.
ವರುಣ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಶಾಸಕರಾಗಿದ್ದ ವರುಣ ಕ್ಷೇತ್ರಕ್ಕೆ ೧,೭೦೦ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದ್ದರಿಂದ ಪ್ರತಿಯೊಂದು ಹಳ್ಳಿಯೂ ಅಭಿವೃದ್ಧಿಗೊಂಡು ಮಾದರಿ ಕ್ಷೇತ್ರವಾಗಿದೆ. ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿ ಆಡಳಿತ ನಡೆಸಿದ ಅವರ ರಾಜಕಾರಣ ನಮಗೆ ಮಾರ್ಗದರ್ಶನವಾಗಿದೆ ಎಂದು ತಿಳಿಸಿದರು.
ವೇದಿಕೆ ಸಮಾರಂಭದಲ್ಲೇ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ಸ್ಪಽಸಿ, ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಕಸಬಾ ಹೋಬಳಿಯ ದಲಿತ ಮುಖಂಡರ ಒತ್ತಾಯದ ಪತ್ರವನ್ನು ಎಐಸಿಸಿ ಅಧ್ಯಕ್ಷರಿಗೆ ಬರೆದಿರುವುದನ್ನು ದಸಂಸ ಜಿಲ್ಲಾ ಸಂಚಾಲಕ ಆಲಗೂಡು ಶಿವಕುಮಾರ್ ಪ್ರಸ್ತಾಪಿಸುತ್ತಿದ್ದಂತೆ ನೆರೆದಿದ್ದ ಜನರು ಹರ್ಷೋದ್ಗಾರಗೈದರು.
ಬುದ್ಧ ವಿಹಾರದ ಬೋಧಿರತ್ನ ಭಂತೇಜಿ, ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ವಸತಿ ಯೋಜನೆ ಜಾಗೃತ ಸಮಿತಿಯ ಮಾಜಿ ಅಧ್ಯಕ್ಷ ಸುನಿಲ್ ಬೋಸ್, ಜಿ.ಪಂ. ಮಾಜಿ ಸದಸ್ಯ ಕೆ.ಮಹದೇವ, ಮಾಜಿ ಉಪ ಪ್ರಧಾನ ಡಿ.ಆರ್.ಮೂರ್ತಿ, ಕುರುಬರ ಸಂಘದ ಅಧ್ಯಕ್ಷ ಎನ್.ಎಸ್.ಮಹದೇವಸ್ವಾಮಿ, ಗ್ರಾಪಂ ಅಧ್ಯಕ್ಷ ಆನಂದ, ಉಪಾಧ್ಯಕ್ಷ ಚೆನ್ನಮ್ಮ, ಸದಸ್ಯ ಡಿ.ನಾಗರಾಜು, ಪುರಸಭೆ ಅಧ್ಯಕ್ಷ ಮದನರಾಜು, ಸದಸ್ಯರಾದ ಟಿ.ಎಂ.ನಂಜುಂಡಸ್ವಾಮಿ, ಬಾದಾಮಿ ಮಂಜು, ಸಿ.ಪ್ರಕಾಶ, ತಾ.ಪಂ ಮಾಜಿ ಅಧ್ಯಕ್ಷ ಅಂದಾನಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಮಹದೇವಣ್ಣ, ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ದೇಗೌಡ, ಮಹಿಳಾ ಅಧ್ಯಕ್ಷ ಕುಪ್ಯ ಭಾಗ್ಯಮ್ಮ, ಲತಾ ಜಗದೀಶ್, ಮುಖಂಡರಾದ ಹುಣಸೂರು ಬಸವಣ್ಣ, ಹೊನ್ನಯ್ಯ, ಎಸ್.ರಾಜಪ್ಪ, ಎಸ್.ಬಸವಣ್ಣ, ಲೋಕೇಶ್, ಕಂಬಯ್ಯ, ರಾಚಯ್ಯ, ಮಹದೇವ, ಅಣ್ಣಯ್ಯ, ರಂಗಸಮುದ್ರ ಮಂಜುನಾಥ, ರಂಗಸ್ವಾಮಿ, ನಂಜುಂಡ, ಎಂ. ಪುಟ್ಟರಾಜು, ಹರೀಶ, ಲಿಂಗಮೂರ್ತಿ, ಬಿಳಿಗೆರೆಹುಂಡಿ ಬಸವರಾಜು ಹಾಗೂ ಇನ್ನಿತರರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago