ಜಿಲ್ಲೆಗಳು

ಅವರಿಬ್ಬರು ಏನೇನು ಮಾತನಾಡಿದ್ದಾರೆಂದು ನೆನಪಿಸಿಕೊಳ್ಳಲಿ : ಸಿದ್ದು,ವಿಶ್ವನಾಥ್‌ ಮೈತ್ರಿಗೆ ಸಂಸದ ಶ್ರೀನಿವಾಸ ಪ್ರಸಾದ್‌ ವ್ಯಂಗ್ಯ

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ವಿಶ್ವನಾಥ್‌ ಅವರು ಮತ್ತೆ ಕಾಂಗ್ರೆಸ್ಸಿಗೆ ಸೇರಲು ಹೊರಟಿರುವ ಬಗ್ಗೆ ವ್ಯಂಗ್ಯವಾಡಿರುವ ಸಂಸದ ಶ್ರೀನಿವಾಸ ಪ್ರಸಾದ್‌ ಅವರಿಬ್ಬರು ಪರಸ್ಪರರ ಬಗ್ಗೆ ಏನು ಮಾತನಾಡಿಕೊಂಡಿದ್ದರೆನ್ನುವುದನ್ನು ನೆನಪಿಸಿಕೊಳ್ಳಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್.ವಿಶ್ವ ನಾಥ್ ಮತ್ತೆ ಒಂದಾಗುತ್ತಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಸಾದ್, ವಿಶ್ವನಾಥ್- ಮತ್ತು ಸಿದ್ದರಾಮಯ್ಯ ಅವರ ಬಗ್ಗೆ ನಾನು ಪ್ರತಿಕ್ರಿಯೆ ಕೊಡದೇ ಇರುವುದೇ ಒಳ್ಳೆಯದು. ಅವರಿಬ್ಬರು ಏನೇನು ಮಾತನಾಡಿದ್ದಾರೆ ಎಂದು ಅವರೇ ನೆನಪಿಸಿಕೊಳ್ಳಲಿ ಎಂದು ಹೇಳಿದರು.

ಸಿದ್ದರಾಮಯ್ಯ ಅವರ ಬಗ್ಗೆ ವಿಶ್ವನಾಥ್ ಏನೇನೋ ಕಟು ಶಬ್ದಗಳನ್ನು ಬಳಸಿದ್ದರು. ಇನ್ನು ವಿಶ್ವನಾಥ್ ಪ್ರಸ್ತಾಪ ಬಂದಾಗ ಸಿದ್ದರಾಮಯ್ಯ ಅವರು ಪಾದರಕ್ಷೆ ಕಳಚಿ ತೋರಿಸಿದ್ದರು. ಇದೀಗ ಮತ್ತೆ ಇಬ್ಬ ರು ಒಂದಾಗುತ್ತಾರೆ ಎಂದರೆ ನಾನೇನು ಹೇಳಲಿ ಎಂದು ಶ್ರೀ ನಿವಾಸ್ ಪ್ರಸಾದ್ ಪ್ರಶ್ನಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago