ಜಿಲ್ಲೆಗಳು

ಆಪ್ತ ಗೆಳೆಯನ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಸಾಮಾಜಿಕ ಹೋರಾಟಗಾರ ಪ ಮಲ್ಲೇಶ್‌ ರವರ ಅಂತಿಮ ದರ್ಶನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪಡೆದರು.
ಈ ವೇಳೆ  ಪ ಮಲ್ಲೇಶ್‌ ರವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಚಿತ್ರದುರ್ಗ ಮೂಲದ ಪ. ಮಲ್ಲೇಶ್‌ ತಮ್ಮ ಓದಿಗಾಗಿ ಮೈಸೂರಿಗೆ ಬಂದವರು. ನಂತರ  ಸಮಾಜವಾದಿ ಚಿಂತನೆಯಿಂದ ಪ್ರೇರಿತರಾಗಿ ಮೈಸೂರನ್ನೇ ಕೇಂದ್ರವಾಗಿಸಿಕೊಂಡು ಹೋರಾಟಕ್ಕೆ ಧುಮುಕಿದವರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಗುರುವಾರ ಮಧ್ಯಾಹ್ನ  ತಮ್ಮ ಮನೆಯಲ್ಲಿ ಕುಸಿದು ಬಿದ್ದ ಅವರನ್ನು  ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನೆನ್ನೆ ದಿನ ಕೊನೆಯುಸಿರೆಳೆದರು. ಮಲ್ಲೇಶ್ ಅವರ ಪತ್ನಿ ಸರ್ವಮಂಗಳ 2021ರ ಮಾರ್ಚ್‌ ನಲ್ಲಿ ನಿಧನರಾಗಿದ್ದರು. ಅವರಿಗೆ  ಒಬ್ಬ ಪುತ್ರ, ಮೂವರು ಪುತ್ರಿಯರಿದ್ದಾರೆ.

ಹೋರಾಟ, ಚಳವಳಿಯನ್ನೇ ಬದುಕಾಗಿಸಿಕೊಂಡಿದ್ದ ಗಾಂಧಿವಾದಿ, ಸಮಾಜಮುಖಿ ಚಿಂತನೆಯ ಪ್ರಖರ ವಾಗ್ಮಿ ಪ.ಮಲ್ಲೇಶ್ ಎಂದಿಗೂ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿಯಾಗಿರಲಿಲ್ಲ. ಆಚಾರ್ಯ ವಿನೋಬಾ ಬಾವೆ, ಜಯಪ್ರಕಾಶ್ ನಾರಾಯಣ್ (ಜೆಪಿ) ಅವರ ಚಳವಳಿಗಳಿಂದ ಪ್ರೇರಿತರಾಗಿ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡು ಜೀವನದುದ್ದಕ್ಕೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದರು.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

4 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

12 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

12 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

12 hours ago