ಜಿಲ್ಲೆಗಳು

ಆಪ್ತ ಗೆಳೆಯನ ಅಂತಿಮ ದರ್ಶನ ಪಡೆದ ಸಿದ್ದರಾಮಯ್ಯ

ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಸಾಮಾಜಿಕ ಹೋರಾಟಗಾರ ಪ ಮಲ್ಲೇಶ್‌ ರವರ ಅಂತಿಮ ದರ್ಶನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪಡೆದರು.
ಈ ವೇಳೆ  ಪ ಮಲ್ಲೇಶ್‌ ರವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಚಿತ್ರದುರ್ಗ ಮೂಲದ ಪ. ಮಲ್ಲೇಶ್‌ ತಮ್ಮ ಓದಿಗಾಗಿ ಮೈಸೂರಿಗೆ ಬಂದವರು. ನಂತರ  ಸಮಾಜವಾದಿ ಚಿಂತನೆಯಿಂದ ಪ್ರೇರಿತರಾಗಿ ಮೈಸೂರನ್ನೇ ಕೇಂದ್ರವಾಗಿಸಿಕೊಂಡು ಹೋರಾಟಕ್ಕೆ ಧುಮುಕಿದವರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಗುರುವಾರ ಮಧ್ಯಾಹ್ನ  ತಮ್ಮ ಮನೆಯಲ್ಲಿ ಕುಸಿದು ಬಿದ್ದ ಅವರನ್ನು  ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನೆನ್ನೆ ದಿನ ಕೊನೆಯುಸಿರೆಳೆದರು. ಮಲ್ಲೇಶ್ ಅವರ ಪತ್ನಿ ಸರ್ವಮಂಗಳ 2021ರ ಮಾರ್ಚ್‌ ನಲ್ಲಿ ನಿಧನರಾಗಿದ್ದರು. ಅವರಿಗೆ  ಒಬ್ಬ ಪುತ್ರ, ಮೂವರು ಪುತ್ರಿಯರಿದ್ದಾರೆ.

ಹೋರಾಟ, ಚಳವಳಿಯನ್ನೇ ಬದುಕಾಗಿಸಿಕೊಂಡಿದ್ದ ಗಾಂಧಿವಾದಿ, ಸಮಾಜಮುಖಿ ಚಿಂತನೆಯ ಪ್ರಖರ ವಾಗ್ಮಿ ಪ.ಮಲ್ಲೇಶ್ ಎಂದಿಗೂ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿಯಾಗಿರಲಿಲ್ಲ. ಆಚಾರ್ಯ ವಿನೋಬಾ ಬಾವೆ, ಜಯಪ್ರಕಾಶ್ ನಾರಾಯಣ್ (ಜೆಪಿ) ಅವರ ಚಳವಳಿಗಳಿಂದ ಪ್ರೇರಿತರಾಗಿ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡು ಜೀವನದುದ್ದಕ್ಕೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದರು.

andolanait

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

2 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

2 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

3 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

4 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

6 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

6 hours ago