ಜಿಲ್ಲೆಗಳು

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ: ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಯ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ನಡೆದಾಡುವ ದೇವರು ಶ್ರೀ ಸಿದ್ದೇಶ್ವರರ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದರು. ಅಲ್ಲದೇ ಚಿತಾಭಸ್ಮವನ್ನು ಯಾರೂ ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆಪಡುತ್ತಾರೋ ಅವರು ಹೆಸರು ನೋಂದಾಯಿಸುವಂತೆಯೂ ಕೂಡಾ ಹೇಳಿದ್ದರು. ಆದರೆ, ಯಾವುದೇ ಭಕ್ತರಿಗೆ ಶ್ರೀಗಳ ಚಿತಾಭಸ್ಮವನ್ನು ನೀಡುವುದಿಲ್ಲ ಎಂದು ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿಗಳ ಆಣತಿಯಂತೆ ನಾವು ಯಾವುದೇ ಚಿತಾಭಸ್ಮವನ್ನು ನೀಡಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿ ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು. ಚಿತಾಭಸ್ಮವನ್ನು ನದಿ ಮತ್ತು ಸಮುದ್ರದಲ್ಲಿ ವಿಸರ್ಜನೆ ಮಾಡಬೇಕೆಂಬುದರ ಕುರಿತು ಆಶ್ರಮದಲ್ಲಿರುವ ಸ್ವಾಮೀಜಿಗಳು ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ಕುರಿತು ಕನ್ಹೇರಿ ಮಠದ ಶ್ರೀಗಳು ಹಾಗೂ ಸುತ್ತೂರು ಮಠದ ಶ್ರೀಗಳು ಸೇರಿದಂತೆ ಇತರ ಸ್ವಾಮೀಜಿಗಳ ಸಲಹೆಗಳನ್ನು ಈಗಾಗಲೇ ಪಡೆದುಕೊಳ್ಳಲಾಗಿದೆ.
ಸದ್ಯದಲ್ಲೇ ಒಂದು ಸಭೆ ನಡೆಸಲಾಗುವುದು. ಆ ಬಳಿಕ ಚಿತಾಭಸ್ಮ ವಿಸರ್ಜನೆಯ ಕುರಿತು ನಿರ್ಧಾರ ಮಾಡುತ್ತೇವೆ. ಮೂರು ದಿನಗಳ ನಂತರ ಅಂದರೆ ನಾಳೆ (ಗುರುವಾರ) ಸರಳ ವಿಧಿ ವಿಧಾನಗಳ ಆಚರಣೆಯ ಮೂಲಕ ಚಿತಾಭಸ್ಮ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಶತಮಾನ ಕಂಡ ಜ್ಞಾನಯೋಗಿ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳಲಾಗದ ಭಕ್ತಗಣ ಇಂದು ಬೆಳ್ಳಂಬೆಳಗ್ಗೆಯೂ ಆಶ್ರಮಕ್ಕೆ ಬಂದು ಅವರ ಚಿತೆಯಿರುವ ಜಾಗಕ್ಕೆ ನಮಸ್ಕರಿಸಿ ತೆರಳುತ್ತಿದ್ದರು. ಶ್ರೀಗಳ ಅಗ್ನಿಸ್ಪರ್ಶ ಜಾಗಕ್ಕೆ ಪೂಜೆ ಸಲ್ಲಿಸಿ ಮನಪೂರ್ವಕ ಭಕ್ತಿ ಅರ್ಪಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನಿರ್ಮೋಹಿಯಾಗಿದ್ದ ಸಿದ್ದೇಶ್ವರ ಸ್ವಾಮೀಜಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚೇತರಿಕೆಗಾಗಿ ನಾಡಿನ ಜನತೆ ವಿಶೇಷ ಪೂಜೆ, ಹೋಮ, ಹವನಗಳನ್ನು ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಸೋಮವಾರ ಸಂಜೆ 6.05 ನಿಮಿಷಕ್ಕೆ ಸ್ವಾಮೀಜಿ ಕೊನೆಯುಸಿರೆಳೆದಿದ್ದು, ಭಕ್ತಸಾಗರ ಶೋಕಸಾಗರದಲ್ಲಿ ಮುಳುಗಿದೆ.

ನಾಡಿನ ಪ್ರಸಿದ್ಧ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರರಾಗಿದ್ದ ಶ್ರೀಗಳ ಮೃತದೇಹದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ರಾತ್ರಿ ನೆರವೇರಿಲಾಗಿದೆ. ರಾಜ್ಯ ಸರ್ಕಾರದಿಂದಲೇ ಎಲ್ಲಾ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಅಂತಿಮವಾಗಿ ವಿಜಯಪುರದ ಜ್ಞಾನಯೋಗಾಶ್ರಮದ ಸಂತನಿಗೆ ಅಗ್ನಿಸ್ಪರ್ಶ ಮಾಡಲಾಯಿತು. ಈ ಮೂಲಕ ದೇಶದ ಆಧ್ಯಾತ್ಮಿಕ ಚಿಂತಕರರೊಬ್ಬರು ಪಂಚಭೂತಗಳಲ್ಲಿ ಲೀನರಾದರು. ಶ್ರೀಗಳ ಅಗಲಿಕೆಯ ಗೌರವಾರ್ಥ ವಿಜಯಪುರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.

andolanait

Recent Posts

SSLC RESULTS | ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ, ಕಲಬುರಗಿಗೆ ಕೊನೆ ಸ್ಥಾನ

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…

10 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…

21 mins ago

ಬರಿದಾಗುತ್ತಿರುವ ಕಪಿಲೆಯ ಒಡಲಿಗೆ ಕೊಳಚೆ ನೀರು

ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…

46 mins ago

ಕಾರುಗಳ ಮುಖಾಮುಖಿ ಡಿಕ್ಕಿ : ಇಬ್ಬರು ಸಾವು

ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…

60 mins ago

ಕೆ.ಆರ್.ನಗರ | ವಿದ್ಯುತ್‌ ಸ್ಪರ್ಶದಿಂದ ಇಬ್ಬರು ದುರ್ಮರಣ

ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ  ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…

1 hour ago

ಪಶ್ಚಿಮ ಬಂಗಾಳ | ಮತದಾನದ ಹೊತ್ತಲ್ಲೇ ಕಚ್ಚಾ ಬಾಂಬ್‌ ದಾಳಿ ; ಹಲವರು ಗಂಭೀರ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…

2 hours ago