ಜಿಲ್ಲೆಗಳು

ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲ: ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ

ವಿಜಯಪುರ: ಸಿದ್ದೇಶ್ವರ ಸ್ವಾಮೀಜಿಯ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುವುದಿಲ್ಲ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ನಡೆದಾಡುವ ದೇವರು ಶ್ರೀ ಸಿದ್ದೇಶ್ವರರ ಚಿತಾಭಸ್ಮವನ್ನು ಭಕ್ತರಿಗೆ ನೀಡಲಾಗುತ್ತಿದೆ ಎಂದು ನಿನ್ನೆ ರಾತ್ರಿ ನಡೆದ ಅಂತ್ಯಕ್ರಿಯೆಯ ವೇಳೆ ಕನ್ಹೇರಿ ಮಠದ ಸ್ವಾಮೀಜಿ ಹೇಳಿದ್ದರು. ಅಲ್ಲದೇ ಚಿತಾಭಸ್ಮವನ್ನು ಯಾರೂ ನದಿ ಹಾಗೂ ಸಾಗರದಲ್ಲಿ ವಿಸರ್ಜನೆ ಮಾಡಲು ಇಚ್ಛೆಪಡುತ್ತಾರೋ ಅವರು ಹೆಸರು ನೋಂದಾಯಿಸುವಂತೆಯೂ ಕೂಡಾ ಹೇಳಿದ್ದರು. ಆದರೆ, ಯಾವುದೇ ಭಕ್ತರಿಗೆ ಶ್ರೀಗಳ ಚಿತಾಭಸ್ಮವನ್ನು ನೀಡುವುದಿಲ್ಲ ಎಂದು ಬಸವಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ಸಿದ್ದೇಶ್ವರ ಸ್ವಾಮೀಜಿಗಳ ಆಣತಿಯಂತೆ ನಾವು ಯಾವುದೇ ಚಿತಾಭಸ್ಮವನ್ನು ನೀಡಲ್ಲ. ಭಕ್ತರು ಬೇಕಾದರೆ ಹೊರಗಿನಿಂದ ವಿಭೂತಿ ತಂದು ಅಂತ್ಯಕ್ರಿಯೆ ನಡೆಸಿದ ಜಾಗದಲ್ಲಿಟ್ಟು ಅದನ್ನೇ ಭಸ್ಮವೆಂದು ಭಾವಿಸಿ ಒಯ್ಯಬೇಕು. ಚಿತಾಭಸ್ಮವನ್ನು ನದಿ ಮತ್ತು ಸಮುದ್ರದಲ್ಲಿ ವಿಸರ್ಜನೆ ಮಾಡಬೇಕೆಂಬುದರ ಕುರಿತು ಆಶ್ರಮದಲ್ಲಿರುವ ಸ್ವಾಮೀಜಿಗಳು ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ಕುರಿತು ಕನ್ಹೇರಿ ಮಠದ ಶ್ರೀಗಳು ಹಾಗೂ ಸುತ್ತೂರು ಮಠದ ಶ್ರೀಗಳು ಸೇರಿದಂತೆ ಇತರ ಸ್ವಾಮೀಜಿಗಳ ಸಲಹೆಗಳನ್ನು ಈಗಾಗಲೇ ಪಡೆದುಕೊಳ್ಳಲಾಗಿದೆ.
ಸದ್ಯದಲ್ಲೇ ಒಂದು ಸಭೆ ನಡೆಸಲಾಗುವುದು. ಆ ಬಳಿಕ ಚಿತಾಭಸ್ಮ ವಿಸರ್ಜನೆಯ ಕುರಿತು ನಿರ್ಧಾರ ಮಾಡುತ್ತೇವೆ. ಮೂರು ದಿನಗಳ ನಂತರ ಅಂದರೆ ನಾಳೆ (ಗುರುವಾರ) ಸರಳ ವಿಧಿ ವಿಧಾನಗಳ ಆಚರಣೆಯ ಮೂಲಕ ಚಿತಾಭಸ್ಮ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದ್ದಾರೆ.

ಶತಮಾನ ಕಂಡ ಜ್ಞಾನಯೋಗಿ ಇನ್ನಿಲ್ಲ ಎಂಬುದನ್ನು ಅರಗಿಸಿಕೊಳ್ಳಲಾಗದ ಭಕ್ತಗಣ ಇಂದು ಬೆಳ್ಳಂಬೆಳಗ್ಗೆಯೂ ಆಶ್ರಮಕ್ಕೆ ಬಂದು ಅವರ ಚಿತೆಯಿರುವ ಜಾಗಕ್ಕೆ ನಮಸ್ಕರಿಸಿ ತೆರಳುತ್ತಿದ್ದರು. ಶ್ರೀಗಳ ಅಗ್ನಿಸ್ಪರ್ಶ ಜಾಗಕ್ಕೆ ಪೂಜೆ ಸಲ್ಲಿಸಿ ಮನಪೂರ್ವಕ ಭಕ್ತಿ ಅರ್ಪಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ನಿರ್ಮೋಹಿಯಾಗಿದ್ದ ಸಿದ್ದೇಶ್ವರ ಸ್ವಾಮೀಜಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಚೇತರಿಕೆಗಾಗಿ ನಾಡಿನ ಜನತೆ ವಿಶೇಷ ಪೂಜೆ, ಹೋಮ, ಹವನಗಳನ್ನು ಮಾಡುವ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ, ಸೋಮವಾರ ಸಂಜೆ 6.05 ನಿಮಿಷಕ್ಕೆ ಸ್ವಾಮೀಜಿ ಕೊನೆಯುಸಿರೆಳೆದಿದ್ದು, ಭಕ್ತಸಾಗರ ಶೋಕಸಾಗರದಲ್ಲಿ ಮುಳುಗಿದೆ.

ನಾಡಿನ ಪ್ರಸಿದ್ಧ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರರಾಗಿದ್ದ ಶ್ರೀಗಳ ಮೃತದೇಹದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ರಾತ್ರಿ ನೆರವೇರಿಲಾಗಿದೆ. ರಾಜ್ಯ ಸರ್ಕಾರದಿಂದಲೇ ಎಲ್ಲಾ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಅಂತಿಮವಾಗಿ ವಿಜಯಪುರದ ಜ್ಞಾನಯೋಗಾಶ್ರಮದ ಸಂತನಿಗೆ ಅಗ್ನಿಸ್ಪರ್ಶ ಮಾಡಲಾಯಿತು. ಈ ಮೂಲಕ ದೇಶದ ಆಧ್ಯಾತ್ಮಿಕ ಚಿಂತಕರರೊಬ್ಬರು ಪಂಚಭೂತಗಳಲ್ಲಿ ಲೀನರಾದರು. ಶ್ರೀಗಳ ಅಗಲಿಕೆಯ ಗೌರವಾರ್ಥ ವಿಜಯಪುರ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಸಹ ಘೋಷಿಸಲಾಗಿತ್ತು.

andolanait

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

6 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

6 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

6 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

6 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

6 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

6 hours ago