ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ಜೈನ ಸಮಾಜದ ಮುಖಂಡರು ಕೂಡಲೇ ಪ್ರವಾಸಿ ತಾಣದ ಅನುಮತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇದಕ್ಕೂ ಮುನ್ನ ನಗರದ ಗಾಂಧಿ ವೃತ್ತದಿಂದ ಮೌನ ಮೆರವಣಿಗೆ ಆರಂಭಿಸಿದ ಸಮಾಜದ ಮುಖಂಡರು ಅಶೋಕ ರಸ್ತೆ, ಇರ್ವಿನ್ ರಸ್ತೆ, ಜೆಎಲ್ಬಿ ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಮೆರವಣಿಗೆ ಅಂತ್ಯಗೊಳಿಸಿದರು.
ಪ್ರತಿಭಟನೆಯಲ್ಲಿ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಉಪಾಧ್ಯಕ್ಷ ಬಿ.ಭರತ್ ರಾಜ್, ಕೋಶಾಧ್ಯಕ್ಷ ಜ್ವಾಲೇಂದ್ರ ಪ್ರಸಾದ್, ಕಾರ್ಯದರ್ಶಿ ಎಂ.ಆರ್.ಸುನಿಲ್ ಕುಮಾರ್, ಸಹ ಕಾರ್ಯದರ್ಶಿ ಪಿ.ಎಸ್. ಲಕ್ಷ್ಮೀಶ್ ಬಾಬು, ಎ.ಎನ್.ಧರಣೇಂದ್ರನ್, ಕೆ.ಚಂದ್ರಶೇಖರ್ ಆರಿಗ, ಅಶೋಕ್ ಪಾಟೀಲ್, ವಿ.ಭರತ್, ಎಸ್.ಪಿ.ಶ್ರೀಕಾಂತ್, ವಸುಪಾಲ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…
ರಾಮನಗರ: ಜಿಮ್ ಟ್ರೇನರ್ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು…