ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ಜೈನ ಸಮಾಜದ ಮುಖಂಡರು ಕೂಡಲೇ ಪ್ರವಾಸಿ ತಾಣದ ಅನುಮತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇದಕ್ಕೂ ಮುನ್ನ ನಗರದ ಗಾಂಧಿ ವೃತ್ತದಿಂದ ಮೌನ ಮೆರವಣಿಗೆ ಆರಂಭಿಸಿದ ಸಮಾಜದ ಮುಖಂಡರು ಅಶೋಕ ರಸ್ತೆ, ಇರ್ವಿನ್ ರಸ್ತೆ, ಜೆಎಲ್ಬಿ ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಮೆರವಣಿಗೆ ಅಂತ್ಯಗೊಳಿಸಿದರು.
ಪ್ರತಿಭಟನೆಯಲ್ಲಿ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಉಪಾಧ್ಯಕ್ಷ ಬಿ.ಭರತ್ ರಾಜ್, ಕೋಶಾಧ್ಯಕ್ಷ ಜ್ವಾಲೇಂದ್ರ ಪ್ರಸಾದ್, ಕಾರ್ಯದರ್ಶಿ ಎಂ.ಆರ್.ಸುನಿಲ್ ಕುಮಾರ್, ಸಹ ಕಾರ್ಯದರ್ಶಿ ಪಿ.ಎಸ್. ಲಕ್ಷ್ಮೀಶ್ ಬಾಬು, ಎ.ಎನ್.ಧರಣೇಂದ್ರನ್, ಕೆ.ಚಂದ್ರಶೇಖರ್ ಆರಿಗ, ಅಶೋಕ್ ಪಾಟೀಲ್, ವಿ.ಭರತ್, ಎಸ್.ಪಿ.ಶ್ರೀಕಾಂತ್, ವಸುಪಾಲ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…