ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾವಣೆಗೊಂಡ ಜೈನ ಸಮಾಜದ ಮುಖಂಡರು ಕೂಡಲೇ ಪ್ರವಾಸಿ ತಾಣದ ಅನುಮತಿಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಇದಕ್ಕೂ ಮುನ್ನ ನಗರದ ಗಾಂಧಿ ವೃತ್ತದಿಂದ ಮೌನ ಮೆರವಣಿಗೆ ಆರಂಭಿಸಿದ ಸಮಾಜದ ಮುಖಂಡರು ಅಶೋಕ ರಸ್ತೆ, ಇರ್ವಿನ್ ರಸ್ತೆ, ಜೆಎಲ್ಬಿ ರಸ್ತೆ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಮೆರವಣಿಗೆ ಅಂತ್ಯಗೊಳಿಸಿದರು.
ಪ್ರತಿಭಟನೆಯಲ್ಲಿ ದಿಗಂಬರ ಜೈನ ಸಮಾಜದ ಅಧ್ಯಕ್ಷ ಎಸ್.ಡಿ.ಮಹೇಶ್ ಪ್ರಸಾದ್, ಉಪಾಧ್ಯಕ್ಷ ಬಿ.ಭರತ್ ರಾಜ್, ಕೋಶಾಧ್ಯಕ್ಷ ಜ್ವಾಲೇಂದ್ರ ಪ್ರಸಾದ್, ಕಾರ್ಯದರ್ಶಿ ಎಂ.ಆರ್.ಸುನಿಲ್ ಕುಮಾರ್, ಸಹ ಕಾರ್ಯದರ್ಶಿ ಪಿ.ಎಸ್. ಲಕ್ಷ್ಮೀಶ್ ಬಾಬು, ಎ.ಎನ್.ಧರಣೇಂದ್ರನ್, ಕೆ.ಚಂದ್ರಶೇಖರ್ ಆರಿಗ, ಅಶೋಕ್ ಪಾಟೀಲ್, ವಿ.ಭರತ್, ಎಸ್.ಪಿ.ಶ್ರೀಕಾಂತ್, ವಸುಪಾಲ್ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…