ಜಿಲ್ಲೆಗಳು

ಹೊಟ್ಟೆಯಲ್ಲಿದ್ದ 5.5 ಕೆಜಿ ಗಡ್ಡೆ ತೆಗೆದ ಸಿಮ್ಸ್ ವೈದ್ಯರ ತಂಡ

ಚಾಮರಾಜನಗರ: ವ್ಯಕ್ತಿಯೊಬ್ಬರ  ಹೊಟ್ಟೆಯಲ್ಲಿ ಬೆಳೆದಿದ್ದ 5.5 ಕೆಜಿ ತೂಕದ ಗಡ್ಡೆಯನ್ನು ಇಲ್ಲಿನ ಸರ್ಕಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಸಿಮ್ಸ್) ವೈದ್ಯರು ಶಸ್ತ್ರಚಿಕಿತ್ಸೆಯ ಮೂಲಕ ಹೊರತೆಗೆದಿದ್ದಾರೆ.
ಇಷ್ಟು ಭಾರದ ದುರ್ವಾಸನೆಯನ್ನು ರೋಗಿಯ ದೇಹದಿಂದ ತೆಗೆದಿರುವುದು ಸಿಮ್ಸ್ ಆಸ್ಪತ್ರೆಯಲ್ಲಿ ಇದೇ ಮೊದಲು. ಆಸ್ಪತ್ರೆಯ ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಕಿರಣ್ ನೇತೃತ್ವದ ತಂಡ 3 ಗಂಟೆಗಳ ಕಾಲ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ತೆಗೆದಿದ್ದಾರೆ.
50 ವರ್ಷದ ವ್ಯಕ್ತಿಯ ಹೊಟ್ಟೆಯಲ್ಲಿದ್ದ ಈ ಗಡ್ಡೆ ಕ್ಯಾನ್ಸರ್ ಗಡ್ಡೆಯಾ ಅಥವಾ ಸಾಮಾನ್ಯ ಗಡ್ಡೆಯಾ ಎಂಬುದು ಸ್ಪಷ್ಟವಾಗಿಲ್ಲ. ಗಡ್ಡೆಯನ್ನು ಸಿಮ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಇದರ ವರದಿ ಬಂದ ಮೇಲೆ ತಿಳಿಯಲಿದೆ ಎಂದು ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ತಿಳಿಸಿದರು.
ಡಾ.ಕಿರಣ್, ಡಾ.ಚಂದ್ರಶೇಖರಯ್ಯ, ಡಾ.ಶಶಿಧರ್ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ ಶಸ್ತ್ರಚಿಕಿತತ್ಸೆಯಲ್ಲಿ ಭಾಗವಹಿಸಿದ್ದರು.

andolanait

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

3 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

3 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago