ಚಾಮರಾಜನಗರ : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಚಾಮರಾಜನಗರ ಗಡಿ ಜಿಲ್ಲೆಯ ನಿವಾಸಿಯಾಗಿರುವ ಇವರಿಗೆ ಈ ಹಿಂದೆಯೂ ಕೂಡ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ , ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…