ಜಿಲ್ಲೆಗಳು

ಗಾಯಕ ಸಿ.ಎಂ ನರಸಿಂಹಮೂರ್ತಿಗೆ ಪ್ರತಿಷ್ಠಿತ ಶಂಕರ್‌ನಾಗ್‌ ಪ್ರಶಸ್ತಿ

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಚಾಮರಾಜನಗರ ಗಡಿ ಜಿಲ್ಲೆಯ ನಿವಾಸಿಯಾಗಿರುವ ಇವರಿಗೆ ಈ ಹಿಂದೆಯೂ ಕೂಡ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ.   ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ , ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago