ಜಿಲ್ಲೆಗಳು

ಗಾಯಕ ಸಿ.ಎಂ ನರಸಿಂಹಮೂರ್ತಿಗೆ ಪ್ರತಿಷ್ಠಿತ ಶಂಕರ್‌ನಾಗ್‌ ಪ್ರಶಸ್ತಿ

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಚಾಮರಾಜನಗರ ಗಡಿ ಜಿಲ್ಲೆಯ ನಿವಾಸಿಯಾಗಿರುವ ಇವರಿಗೆ ಈ ಹಿಂದೆಯೂ ಕೂಡ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ.   ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ , ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago