ಜಿಲ್ಲೆಗಳು

ಗಾಯಕ ಸಿ.ಎಂ ನರಸಿಂಹಮೂರ್ತಿಗೆ ಪ್ರತಿಷ್ಠಿತ ಶಂಕರ್‌ನಾಗ್‌ ಪ್ರಶಸ್ತಿ

ಚಾಮರಾಜನಗರ  : ಜಿಲ್ಲೆಯ ನಿವಾಸಿ ಜಾನಪದ ಗಾಯಕ ಹಾಗೂ ರಂಗಕರ್ಮಿ ಸಿಎಂ ನರಸಿಂಹಮೂರ್ತಿ ಅವರು ಪ್ರತಿಷ್ಠಿತ ಶಂಕರ್ ನಾಗ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇದೇ ತಿಂಗಳ 26ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರಂಗ ಪಯಣ ತಂಡದವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿರುವ ರಾಜ್ಯಮಟ್ಟದ ಶಂಕರ್ ನಾಗ್ ನಾಟಕೋತ್ಸವದಲ್ಲಿ ಇವರಿಗೆ ಚಿತ್ರ ನಟರಾದ ರಮೇಶ್ ಭಟ್ ಮತ್ತು ಮಂಡ್ಯ ರಮೇಶ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಚಾಮರಾಜನಗರ ಗಡಿ ಜಿಲ್ಲೆಯ ನಿವಾಸಿಯಾಗಿರುವ ಇವರಿಗೆ ಈ ಹಿಂದೆಯೂ ಕೂಡ ಅಮೆರಿಕಾದ ಅಕ್ಕ ಒಕ್ಕೂಟ ನಡೆಸುವ ವಿಶ್ವಕನ್ನಡ ಸಮ್ಮೇಳನ ಸೇರಿದಂತೆ ನೂರಾರು ಅಂತರಾಷ್ಟ್ರೀಯ ರಾಷ್ಟ್ರೀಯ ರಾಜ್ಯ ಮತ್ತು ಸ್ಥಳೀಯ ಸಾಹಿತ್ಯ ಸಮ್ಮೇಳನಗಳು ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲಿ ಭಾಗವಹಿಸಿ ಜನ ಮೆಚ್ಚುಗೆ ಗಳಿಸಿದ್ದಾರೆ. ಪ್ರತಿವರ್ಷ ಕನ್ನಡ ಸಾಹಿತ್ಯ ಸಂಗೀತ ಜಾನಪದ ರಂಗಭೂಮಿಗೆ ಸಂಬಂಧಿಸಿದಂತೆ ಉತ್ಸವಗಳನ್ನು ನಡೆಸುತ್ತಾರೆ. ಕನ್ನಡ ಜಾನಪದ ಸಾಹಿತ್ಯ ರಂಗಭೂಮಿ ಕ್ಷೇತ್ರಗಳಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ.   ಇವರಿಗೆ ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಕರ್ನಾಟಕ ನಾಟಕ ಅಕಾಡೆಮಿ ಸಿಜಿಕೆ ಪ್ರಶಸ್ತಿ, ಮಂಟೇಸ್ವಾಮಿ ಪ್ರಶಸ್ತಿ, ದೂರದರ್ಶನ ಚಂದನ ಪ್ರಶಸ್ತಿ , ಎಸ್ ಕೆ ಕರೀಮ್ ಖಾನ್ ಪ್ರಶಸ್ತಿ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಲಭಿಸಿದೆ. ಕರ್ನಾಟಕ ಸುಗಮ ಸಂಗೀತ ಪರಿಷತ್ತು ,ಕರ್ನಾಟಕ ರಂಗ ಪರಿಷತ್ತು ,ಕರ್ನಾಟಕ ಜಾನಪದ ಪರಿಷತ್ತು, ಭಾರತ ಯಾತ್ರ ಕೇಂದ್ರ ರಂಗವಾಹಿನಿ ಸಂಸ್ಥೆಗಳು ಇವರನ್ನು ಅಭಿನಂದಿಸಿವೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

4 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

6 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

6 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

12 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

12 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

13 hours ago