ಜಿಲ್ಲೆಗಳು

ಮೈಸೂರು ಕಾರಾಗೃಹ ವಾಸಿಗಳಿಗೆ ಕೌಶಲ ತರಬೇತಿ

ಮೈಸೂರು ಜಿಲ್ಲಾ ಕಾರಾಗೃಹದಲ್ಲಿ ೧೪೦ ಕೈದಿಗಳಿಗೆ ಸುಧಾರಿತ ಕೌಶಲ ಕಲಿಕೆ

-ಬಿ.ಎನ್.ಧನಂಜಯಗೌಡ

ಮೈಸೂರು: ಜೈಲಿನಿಂದ ಬಂಧಮುಕ್ತರಾದ ನಂತರ ಸಾಮಾನ್ಯರಂತೆ ದುಡಿದು ಬದುಕಲು ಪೂರಕವಾಗುವಂತೆ ಸುಧಾರಿತ ಕೌಶಲ ತರಬೇತಿಯನ್ನು ೧೪೦ ಕೈದಿಗಳಿಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನೀಡಲಾಗುತ್ತಿದೆ.

ತಿಳಿದೋ, ತಿಳಿಯದೆಯೋ ನಾನಾ ತರದ ತಪ್ಪುಗಳನ್ನು ಮಾಡಿ, ಕಾರಾಗೃಹ ಸೇರುವ ಕೈದಿಗಳಿಗೆ ಬಂಧಮುಕ್ತರಾದ ನಂತರ ಎಲ್ಲರಂತೆ ನ್ಯಾಯಯುತ ಮಾರ್ಗದಲ್ಲಿ ಬದುಕಲು ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ ಮತ್ತು ಕಾರಾಗೃಹ ಇಲಾಖೆ ಜಂಟಿಯಾಗಿ ನಾನಾ ರೀತಿಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ.

ಪುರುಷ, ಮಹಿಳಾ ಕಾರಾಗೃಹ ವಾಸಿಗಳಿಗೆ ಟೈಲರಿಂಗ್, ಎಲೆಕ್ಟ್ರಿಷಿಯನ್, ತೋಟಗಾರಿಕೆ, ಡೇಟಾ ಎಂಟ್ರಿ, ಬ್ಯೂಟಿಷಿಯನ್, ಕೇಶ ವಿನ್ಯಾಸದಂತಹ ಸುಧಾರಿತ ಕೌಶಲ ತರಬೇತಿಯನ್ನು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮವು (ಕೆಎಸ್‌ಡಿಸಿ) ನೀಡಲಾಗುತ್ತಿದೆ.

ಸರ್ಟಿಫಿಕೇಟ್ ಕೋರ್ಸ್: ಈ ತರಬೇತಿಗಳನ್ನು ಸರ್ಟಿಫಿಕೇಟ್ ಕೋರ್ಸ್ ಆಧಾರದಲ್ಲಿ ಹಮ್ಮಿಕೊಂಡಿದ್ದು, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮವೇ ತರಬೇತಿ ಪಡೆಯುವ ಕೈದಿಗಳ ಕಲಿಕೆಯ ಮಟ್ಟವನ್ನು ನಿರ್ಧರಿಸಿ, ಸರ್ಟಿಫಿಕೇಟ್ ನೀಡಲಿದೆ. ವಿದ್ಯಾರ್ಹತೆ ಮತ್ತು ಆಸಕ್ತಿಯನ್ನು ಆಧರಿಸಿ, ೧೪೦ ಕೈದಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗಿದೆ.

ತರಬೇತಿಯ ವಿವರ: ಜನಶಿಕ್ಷಣ ಸಂಸ್ಥೆಯ ಎನ್‌ಎಸ್‌ಡಿಸಿ ಅಡಿಯಲ್ಲಿ ೨೦ ಪುರುಷ ಕೈದಿಗಳಿಗೆ ೧೦೫ದಿನಗಳ ಎಲೆಕ್ಟ್ರಿಷಿಯನ್ ತರಬೇತಿ ನೀಡಲಾಗುತ್ತಿದೆ. ಈ ತರಬೇತಿಗೆ ಎನ್‌ಎಸ್‌ಡಿಸಿಯಿಂದಲೇ ಸರ್ಟಿಫಿಕೇಟ್ ನೀಡಲಾಗುತ್ತದೆ.

ಇನ್ನು ಜೆಕೆ ಟೈರ್ಸ್‌ ಸಿಎಸ್‌ಆರ್ ಫಂಡ್‌ನಿಂದ ೨೦ ಮಹಿಳಾ ಕೈದಿಗಳಿಗೆ ೨೫೦ ಗಂಟೆಗಳ ಬ್ಯೂಟಿಷಿಯನ್, ೨೦ ಪುರುಷ ಕೈದಿಗಳಿಗೆ ೨೫೦ ಗಂಟೆಗಳ ಕೇಶ ವಿನ್ಯಾಸ, ೨೦ ಪುರುಷ ಕೈದಿಗಳಿಗೆ ೩೦೦ ಗಂಟೆಗಳ ಡೊಮೆಸ್ಟಿಕ್ ಹೆಲ್ಫ್ ಡೆಸ್ಕ್ ತರಬೇತಿಯನ್ನು ನೀಡಲಾಗುತ್ತಿದೆ. ಈ ತರಬೇತಿಗಳನ್ನು ಸಿಎಸ್‌ಆರ್ ಚಟುವಟಿಕೆಯಡಿ ಹಮ್ಮಿಕೊಂಡಿದ್ದರೂ ಕಲಿಕೆಯ ಮಟ್ಟವನ್ನು ನಿರ್ಧರಿಸಿ, ಕೆಎಸ್‌ಡಿಸಿ ಸರ್ಟಿಫಿಕೇಟ್ ನೀಡಲಿದೆ.

ಕೆಎಸ್‌ಡಿಸಿ, ಕಾರಾಗೃಹ ಇಲಾಖೆಯ ತರಬೇತಿ: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ ಮತ್ತು ಕಾರಾಗೃಹ ಇಲಾಖೆಯಿಂದ ೩೦ ಕೈದಿಗಳಿಗೆ ೨೭೦ ಗಂಟೆಗಳ ಟೈಲರಿಂಗ್, ೩೦ ಕೈದಿಗಳಿಗೆ ೩೦೦ ತೋಟಗಾರಿಕೆ ತರಬೇತಿ ನೀಡಲಾಗುತ್ತಿದೆ. ಈ ೬೦ ಮಂದಿಯೂ ಪುರುಷ ಕೈದಿಗಳಾಗಿದ್ದಾರೆ. ಇದಕ್ಕೂ ಕೆಎಸ್‌ಡಿಸಿ ಸರ್ಟಿಫಿಕೇಟ್ ನೀಡಲಿದೆ.

ವೆಚ್ಚ: ಈ ಎಲ್ಲ ತರಬೇತಿಗಳು ಪ್ರತಿದಿನ ೩ರಿಂದ ೪ ಗಂಟೆಗಳ ಕಾಲ ನಡೆಯಲಿದೆ. ಜನಶಿಕ್ಷಣ ಸಂಸ್ಥೆಯು ತರಬೇತಿ ನೀಡಲು ಒಬ್ಬರನ್ನು ನಿಯೋಜಿಸಿದ್ದು, ಬಹಳ ಹಿಂದಿನಿಂದಲೂ ಸಂಸ್ಥೆ ತರಬೇತಿ ನೀಡುತ್ತಾ ಬರುತ್ತಿದೆ. ಇನ್ನುಳಿದ ಎಲ್ಲ ತರಬೇತಿ ಕಾರ್ಯಕ್ರಮಗಳಿಗೂ ತರಬೇತಿ ನೀಡಲು ತಲಾ ಇಬ್ಬರನ್ನು ನಿಯೋಜಿಸಲಾಗಿದೆ. ಜೆಕೆ ಟೈರ್ಸ್‌ನಿಂದ ಹಮ್ಮಿಕೊಂಡಿರುವ ಮೂರು ತರಬೇತಿ ಕಾರ್ಯಕ್ರಮಗಳಿಗೆ ೬.೬೨ ಲಕ್ಷ ರೂ., ಕೆಎಸ್‌ಡಿಸಿ, ಕಾರಾಗೃಹ ಇಲಾಖೆ ಮತ್ತು ಕಾರಾಗೃಹ ಇಲಾಖೆ ಸಹಯೋಗದ ಎರಡು ತರಬೇತಿ ಕಾರ್ಯಕ್ರಮಗಳಿಗೆ ೭.೦೪ ಲಕ್ಷ ರೂ. ವೆಚ್ಚವಾಗಲಿದೆ.

ಈ ಎಲ್ಲ ತರಬೇತಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸರ್ಟಿಫಿಕೇಟ್ ಕೋರ್ಸ್‌ಗಳಾಗಿವೆ. ಈ ಪ್ರಮಾಣ ಪತ್ರಗಳಿಗೆ ಲೈಫ್ ಟೈಮ್ ವಾರಂಟಿ ಇರಲಿದೆ. ಬಂಧಮುಕ್ತವಾದ ನಂತರ ಇದರ ಆಧಾರದಲ್ಲಿ ಸಾಲ ಸೌಲಭ್ಯ ಪಡೆದು ಉದ್ಯಮ ನಡೆಸಬಹುದು. ಕೈದಿಗಳ ಮನಃಪರಿವರ್ತನೆ ಜೊತೆಗೆ ಕ್ರಿಯಾಶೀಲವಾಗಿಟ್ಟು, ಅವರ ಜೀವನೋಪಾಯಕ್ಕೂ ನೆರವಾಗುವ ಕೌಶಲ ತರಬೇತಿ ನೀಡಿ ದುಡಿಮೆಯಲ್ಲಿ ತೊಡಗಿಸಿಕೊಳ್ಳಲು ಈ ಮೂಲಕ ನೆರವು ನೀಡಲಾಗುತ್ತಿದೆ. – ದಿವ್ಯಶ್ರೀ, ಮುಖ್ಯ ಅಧೀಕ್ಷಕರು, ಮೈಸೂರು ಕೇಂದ್ರ ಕಾರಾಗೃಹ

 

 

andolana

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

2 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

2 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

2 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

2 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

2 hours ago