ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.
ಇತಿಹಾಸ, ತ್ಯಾಗ, ಬಲಿದಾನ, ಸ್ವಾತಂತ್ರ್ಯ, ಸಂಗ್ರಾಮ, ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು, ಕಳೆದ ಎಂಟು ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ವಿರೋಧಿಸಿ ಈ ವಿಚಾರಗಳ ಮೂಲಕ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ದೇಶಾದ್ಯಂತ ಸುಮಾರು 3600 ಕಿಲೋಮೀಟರ್ ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಪ್ರಾರಂಭ ಮಾಡಲಿದ್ದು ಈಗಾಗಲೇ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ತಮಿಳುನಾಡು, ಕೇರಳ ಮುಗಿಸಿ ಕರ್ನಾಟಕ ರಾಜ್ಯಕ್ಕೆ ಬಂದಿದೆ.
ಕಟೀಲ್ ಅವರು ಒಂದು ಜವಾಬ್ದಾರಿ ಪಕ್ಷದ ಅಧ್ಯಕ್ಷರಾಗಿ ಇಂತಹ ಹೇಳಿಕೆಗಳನ್ನು ಕೊಡುವುದಕ್ಕೆ ನಾಚಿಕೆ ಆಗಬೇಕು, ಹೇಳಿಕೆ ನೀಡುವ ಕನಿಷ್ಠ ಪರಿಜ್ಞಾನ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಭಾರತೀಯ





