ಜಿಲ್ಲೆಗಳು

ರಾಗಿ ವಾಸನೆ ಹಿಡಿದು ನ್ಯಾಯಬೆಲೆ ಅಂಗಡಿಗೆ ಬಂದ ಕಾಡಾನೆಗಳು ಮಾಡಿದ್ದೇನು ಗೊತ್ತಾ…

ನ್ಯಾಯಬೆಲೆ ಅಂಗಡಿ ಶೆಟರ್ ಮುರಿದು ನುಗ್ಗಿ ರಾಗಿ ತಿಂದು ಬಿಸಾಡಿದ ಗಜಗಳು

ಸರಗೂರು: ತಾಲ್ಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನುಗನಹಳ್ಳಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಮೇಲೆ ಕಾಡಾನೆ ಹಿಂಡು ಏಕಾಏಕಿ ದಾಳಿ ನಡೆಸಿ ಅಂಗಡಿ ಬಾಗಿಲು ಮುರಿದು ರಾಗಿ ತಿಂದು ಬಿಸಾಡಿರುವ ಘಟನೆ ನಡೆದಿದೆ. ಇದಲ್ಲದೆ ಗ್ರಾಮದ ಬಾಳೆ ತೋಟಕ್ಕೂ ನುಗ್ಗಿ, ಬಾಳೆ ಗಿಡಗಳನ್ನು ತಿಂದು ತುಳಿದಿವೆ. ಇದರಿಂದ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.


ಮನುಗನಹಳ್ಳಿ ಗ್ರಾಮದ ಎಚ್‌ಎಚ್‌ಆರ್ ಪದ್ಮಾಂಬ ಎಂಬವರಿಗೆ ಸೇರಿದ ನ್ಯಾಯಬೆಲೆ ಅಂಗಡಿಗೆ ಸಮೀಪದ ಚಿಕ್ಕದೇವಮ್ಮನ ಬೆಟ್ಟಕ್ಕೆ ಹೊಂದಿಕೊಂಡಂತಿರುವ ಕಾಡಿನಿಂದ ಹೊರಬಂದ ಮೂರು ಆನೆಗಳು ಸೋಮವಾರ ರಾತ್ರಿ ಅಂಗಡಿ ಒಳಗಡೆ ಸುರಿದ ರಾಗಿಯ ವಾಸನೆ ಜಾಡು ಹಿಡಿದು ಅಂಗಡಿ ಬಾಗಿಲು ಮುರಿದು ಸುಮಾರು ೨೦ಕ್ಕೂ ಹೆಚ್ಚು ರಾಗಿ ಚೀಲಗಳನ್ನು ಹೊರಗೆಳೆದು ತಿಂದು ಬಿಸಾಡಿವೆ. ಇದಲ್ಲದೆ ರೋಲಿಂಗ್ ಶೆಟರ್‌ನ್ನು ಮುರಿದು ಹಾಕಿವೆ. ಇದರಿಂದ ಅಂಗಡಿ ಮಾಲೀಕರು ಭಯಗೊಂಡಿದ್ದರೆ. ಚೀಲದಲ್ಲಿನ ರಾಗಿ, ಟೇಬಲ್, ಕಂಪ್ಯೂಟರ್ ಲ್ಯಾಪ್‌ಟಾಪ್, ತೂಕದ ಯಂತ್ರ ಸೇರಿದಂತೆ ಇನ್ನಿತರ ಪರಿಕರಗಳು ಜಖಂಗೊಂಡಿವೆ.


ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಎಂ.ಎಸ್.ಅನಸೂಯ, ಆಹಾರ ನಿರೀಕ್ಷಕ ವೇದಮೂರ್ತಿ, ಸರಗೂರು ಠಾಣೆಯ ಪೊಲೀಸ್ ಸಿಬ್ಬಂದಿ ನಂದೀಶ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿ, ವರದಿ ತರಿಸಿದರು.
ಬಾಳೆ ತೋಟಕ್ಕೂ ಹಾನಿ: ಕಾಡಿನಿಂದ ಹೊರಬಂದ ಕಾಡಾನೆ ಹಿಂಡು ಸಮೀಪದ ಬಾಳೆ ತೋಟಕ್ಕೂ ನುಗ್ಗಿ ಬಾಳೆ ಗಿಡಗಳನ್ನು ತಿಂದು ತುಳಿದು ನಾಶಗೊಳಿಸಿವೆ. ಇದರಿಂದ ಕಂಗಲಾದ ರೈತರು ಅರಣ್ಯ ಇಲಾಖೆ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮದ ರೈತ ಮಹೇಶ್, ರಾಜೇಂದ್ರಬಾಬು ಎಂಬವರ ಬಾಳೆತೋಟಕ್ಕೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಹಿಂಡು ಕಟಾವಿಗೆ ಬಂದಿದ್ದ ಬಾಳೆ ಗಿಡಗಳನ್ನು ತಿಂದಿವೆ. ಇದಲ್ಲದೆ ರೈತರೊಬ್ಬರ ಮುಸುಕಿನಜೋಳವನ್ನೂ ಸಂಪೂರ್ಣವಾಗಿ ತಿಂದು ನಾಶಗೊಳಿಸಿವೆ. ಆಕ್ರೋಶಗೊಂಡ ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟಿಸಿದರು. ಅರಣ್ಯ ಇಲಾಖೆಯವರು ಕಾಡಿನೊಳಗಡೆ ಓಡಿಸುತ್ತಿಲ್ಲ. ಆನೆಗಳ ಹಿಂಡು ಅಲ್ಲಲ್ಲಿ ಅಂದರೆ ಚಿಕ್ಕದೇವಮ್ಮನ ಬೆಟ್ಟದ ಆಜುಬಾಜಿನಲ್ಲಿ ಅಲೆದಾಡುತ್ತಿವೆ ಎಂದು ದೂರಿದರು.
ಗ್ರಾಮಸ್ಥರಾದ ಸುಂದರ್‌ರಾಜ್, ಜಲೇಂದ್ರ, ವಾಜಿ ಗೌಡಿಕೆ ಮಹದೇವಸ್ವಾಮಿ, ವೀರಭದ್ರಪ್ಪ, ಶಿವರುದ್ರಪ್ಪ, ಅಂಗಡಿ ಮಹದೇವಸ್ವಾಮಿ, ಎಂ.ಶಿವಣ್ಣ, ರಾಜೇಂದ್ರಬಾಬು, ಮಂಜುನಾಥ್ ಮುಂತಾದವರು ಹಾಜರಿದ್ದರು.

andolanait

Recent Posts

ವಿಧಾನಸೌಧಕ್ಕೆ ಮತ್ತೆ ಬರೋದು ಭಗವಂತನ ಇಚ್ಛೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮರಳಿ ವಿಧಾನಸೌಧ ಪ್ರವೇಶ ಮಾಡುವ ಬಗ್ಗೆ ಜನರ ಆಶೀರ್ವಾದ ಮತ್ತು ಭಗವಂತನ ಇಚ್ಛೆ ನಿರ್ಧರಿಸುತ್ತದೆ ಎಂದು ಕೇಂದ್ರದ ಬೃಹತ್…

2 hours ago

ಜುಲೈ.3ರಿಂದ ವಾರ್ಷಿಕ ಅಮರನಾಥ ಯಾತ್ರೆ ಆರಂಭ

ಶ್ರೀನಗರ: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಗುಹೆಗೆ ವಾರ್ಷಿಕ ತೀರ್ಥಯಾತ್ರೆ ಈ ವರ್ಷ ಜುಲೈ 3ರಂದು ಆರಂಭವಾಗಲಿದೆ. ಕೇಂದ್ರಾಡಳಿತ…

2 hours ago

ಪ್ರಧಾನಿ ಮೋದಿಗೆಂದೇ ಮೈಸೂರು ಮಹಾರಾಜರು ಧರಿಸುತ್ತಿದ್ದ ಮಾದರಿಯ ಪೇಟ ತಯಾರು

ಮೈಸೂರು: ಇದೇ ಏಪ್ರಿಲ್.15ರಂದು ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಅಂದು ಪ್ರಧಾನಿ ನರೇಂದ್ರ…

3 hours ago

ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರು: ಬಾಗಲಕೋಟೆ ಜಿಲ್ಲೆ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಬ್ಲಾಕ್‌ಮೇಲ್‌ ಆರೋಪ…

3 hours ago

ಹೈಕಮಾಂಡ್‌ ಹೇಳಿದರೆ ಸಚಿವ ಸ್ಥಾನ ಬಿಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈಕಮಾಂಡ್‌ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…

4 hours ago

ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಭಾರೀ ಏರಿಕೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…

5 hours ago