ಮಡಿಕೇರಿ: ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಮನೆಯ ಛಾವಣಿಗೆ ಹಾಕಿದ್ದ ಶೀಟ್ ನಡಿ ಸೇರಿಕೊಂಡಿದ್ದ ನಾಗರಹಾವೊಂದನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ.
ದೊಡ್ಡ ಗಾತ್ರದ ನಾಗರಹಾವು ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಶೀಟ್ನಲ್ಲಿ ಆಶ್ರಯ ಪಡೆದಿತ್ತು. ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅಡುಗೆ ಕೋಣೆಯ ಮೇಲೆ ಶೀಟ್ನಡಿ ಹಾವು ಇರುವುದು ಕಂಡುಬಂತು. ಇದನ್ನು ಕೆಳಗಿನಿಂದ ಸೆರೆ ಹಿಡಿಯುವುದು ಅಸಾಧ್ಯವಾದ ಕಾರಣ ಸುರೇಶ್ ಅವರು ಗೋಡೆ ಮೇಲೆ ಹತ್ತಿ ಶೀಟ್ ಮೇಲಕ್ಕೆತ್ತಿ ಅತ್ಯಂತ ಸಾಹಸದಿಂದ ನಾಗರ ಹಾವನ್ನು ಸೆರೆ ಹಿಡಿದಿದ್ದಾರೆ. ಬಳಿಕ ನಾಗರಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಸುರೇಶ್ ಅವರ ಸಾಹಸಕ್ಕೆ ಗ್ರಾಮಸ್ಥರ ಮೆಚ್ಚುಗೆ ಸೂಚಿಸಿದ್ದಾರೆ. ರಾಜೇಶ್ ಅವರ ಮನೆಯವರು ಕೃತಜ್ಞತೆ ಸೂಚಿಸಿದ್ದಾರೆ.
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…
೩೦ ವರ್ಷ ಪ್ರಾಯದ ಸಫುರಾ ಖಾನ್ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…