ಜಿಲ್ಲೆಗಳು

ಮನೆಯ ಛಾವಣಿಯ ಶೀಟಿನಡಿ ಬೆಚ್ಚಗೆ ಮಲಗಿದ್ದ ನಾಗಪ್ಪ

ಮಡಿಕೇರಿ: ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಮನೆಯ ಛಾವಣಿಗೆ ಹಾಕಿದ್ದ ಶೀಟ್ ನಡಿ ಸೇರಿಕೊಂಡಿದ್ದ ನಾಗರಹಾವೊಂದನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ.


ದೊಡ್ಡ ಗಾತ್ರದ ನಾಗರಹಾವು ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಶೀಟ್ನಲ್ಲಿ ಆಶ್ರಯ ಪಡೆದಿತ್ತು. ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅಡುಗೆ ಕೋಣೆಯ ಮೇಲೆ ಶೀಟ್ನಡಿ ಹಾವು ಇರುವುದು ಕಂಡುಬಂತು. ಇದನ್ನು ಕೆಳಗಿನಿಂದ ಸೆರೆ ಹಿಡಿಯುವುದು ಅಸಾಧ್ಯವಾದ ಕಾರಣ ಸುರೇಶ್ ಅವರು ಗೋಡೆ ಮೇಲೆ ಹತ್ತಿ ಶೀಟ್ ಮೇಲಕ್ಕೆತ್ತಿ ಅತ್ಯಂತ ಸಾಹಸದಿಂದ ನಾಗರ ಹಾವನ್ನು ಸೆರೆ ಹಿಡಿದಿದ್ದಾರೆ. ಬಳಿಕ ನಾಗರಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಸುರೇಶ್ ಅವರ ಸಾಹಸಕ್ಕೆ ಗ್ರಾಮಸ್ಥರ ಮೆಚ್ಚುಗೆ ಸೂಚಿಸಿದ್ದಾರೆ. ರಾಜೇಶ್ ಅವರ ಮನೆಯವರು ಕೃತಜ್ಞತೆ ಸೂಚಿಸಿದ್ದಾರೆ.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago