ಮಡಿಕೇರಿ: ತಾಲ್ಲೂಕಿನ ನೆಲ್ಲಿಹುದಿಕೇರಿ ಗ್ರಾಮದಲ್ಲಿ ಮನೆಯ ಛಾವಣಿಗೆ ಹಾಕಿದ್ದ ಶೀಟ್ ನಡಿ ಸೇರಿಕೊಂಡಿದ್ದ ನಾಗರಹಾವೊಂದನ್ನು ಸೆರೆ ಹಿಡಿಯುವಲ್ಲಿ ಇಲ್ಲಿನ ಸ್ನೇಕ್ ಸುರೇಶ್ ಯಶಸ್ವಿಯಾಗಿದ್ದಾರೆ.
ದೊಡ್ಡ ಗಾತ್ರದ ನಾಗರಹಾವು ನೆಲ್ಲಿಹುದಿಕೇರಿ ಗ್ರಾಮದ ಕುಂಬಾರ ಗುಂಡಿ ರಾಜೇಶ್ ಎಂಬವರ ಮನೆಯ ಶೀಟ್ನಲ್ಲಿ ಆಶ್ರಯ ಪಡೆದಿತ್ತು. ಹಾವು ಕಂಡು ಭಯಭೀತರಾದ ರಾಜೇಶ್ ಕುಟುಂಬ ಕೂಡಲೇ ಗುಹ್ಯ ಗ್ರಾಮದ ಉರಗ ಪ್ರೇಮಿ ಸುರೇಶ್ ಪೂಜಾರಿ ಅವರಿಗೆ ದೂರವಾಣಿ ಮೂಲಕ ವಿಷಯ ತಿಳಿಸಿದರು. ಸುರೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಅಡುಗೆ ಕೋಣೆಯ ಮೇಲೆ ಶೀಟ್ನಡಿ ಹಾವು ಇರುವುದು ಕಂಡುಬಂತು. ಇದನ್ನು ಕೆಳಗಿನಿಂದ ಸೆರೆ ಹಿಡಿಯುವುದು ಅಸಾಧ್ಯವಾದ ಕಾರಣ ಸುರೇಶ್ ಅವರು ಗೋಡೆ ಮೇಲೆ ಹತ್ತಿ ಶೀಟ್ ಮೇಲಕ್ಕೆತ್ತಿ ಅತ್ಯಂತ ಸಾಹಸದಿಂದ ನಾಗರ ಹಾವನ್ನು ಸೆರೆ ಹಿಡಿದಿದ್ದಾರೆ. ಬಳಿಕ ನಾಗರಹಾವನ್ನು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಸುರೇಶ್ ಅವರ ಸಾಹಸಕ್ಕೆ ಗ್ರಾಮಸ್ಥರ ಮೆಚ್ಚುಗೆ ಸೂಚಿಸಿದ್ದಾರೆ. ರಾಜೇಶ್ ಅವರ ಮನೆಯವರು ಕೃತಜ್ಞತೆ ಸೂಚಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…