ಜಿಲ್ಲೆಗಳು

ಸಮಾಜ ಸೇವಕ ನಿಶಾಂತ್ ಜೊತೆ ಗುರುತಿಸಿಕೊಂಡ ಜೆಡಿಎಸ್ ಮುಖಂಡರುಗಳು

ಹನೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಮುಖಂಡರುಗಳು ಸಮಾಜಸೇವಕ ನಿಶಾಂತ್ ಬಣದಲ್ಲಿ ಗುರುತಿಸಿಕೊಳ್ಳುವ ಮೂಲಕ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಅವರಿಗೆ ಶಾಕ್ ನೀಡಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ಗಳು ಮುಖಂಡರುಗಳು ಅನ್ಯ ಪಕ್ಷದತ್ತ ವಲಸೆ ಹೋಗುತ್ತಿರುವುದು ಸಹಜ ಆದರೆ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ರವರ ಪಕ್ಷ ಸಂಘಟನೆ ಮೆಚ್ಚಿ ಕ್ಷೇತ್ರಾದ್ಯಂತ ನೂರಾರು ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.

ಆದರೆ ಕಳೆದ 2ದಿನಗಳ ಹಿಂದೆ ನಡೆದ ದಿಢೀರ್ ಬದಲಾವಣೆಯಲ್ಲಿ ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಕಣ್ಣೂರು ಬುಲೆಟ್ ಬಸವರಾಜು , ಅಮೀನ್, ಕಿರಣ್ ಹಾಗೂ ಪಟ್ಟಣ ಪಂಚಾಯಿತಿ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸ್ವಾಮಿ,ಕಾರ್ಯಕರ್ತರುಗಳಾದ ಬಾಬು, ವೆಂಕಟೇಶ್, ರಾಚಪ್ಪ , ಸೇರಿದಂತೆ ಇನ್ನಿತರ ಮುಖಂಡರುಗಳು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಸಮೀಪ ನಿಶಾಂತ್ ಅವರ ಬಣದಲ್ಲಿ ಗುರುತಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಒಂದೆಡೆ ಜೆಡಿಎಸ್ ಪಕ್ಷಕ್ಕೆ ಪಕ್ಷಾಂತರ ಪರ್ವ ನಡೆಯುತ್ತಿದ್ದರೆ,ಇನ್ನೊಂದೆಡೆ ಜೆಡಿಎಸ್ ನಿಂದ ಸಮಾಜಸೇವಕ ನಿಶಾಂತ್ ರವರ ಬಣದಲ್ಲಿ ಹತ್ತಾರು ಜೆಡಿಎಸ್ ಕಾರ್ಯಕರ್ತರು ಗುರುತಿಸಿಕೊಂಡಿರುವುದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ರವರಿಗೆ ಹಿನ್ನಡೆಯಾದಂತಾಗಿದೆ.

ಸಂಘಟನೆಯತ್ತ ನಿಶಾಂತ್ : ಹನೂರು ಅಭಿವೃದ್ಧಿಯ ಸಂಕಲ್ಪ ಎಂಬ ಘೋಷಣೆಯೊಂದಿಗೆ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಸೇವೆ ಮಾಡುತ್ತಿರುವ ಸಮಾಜ ಸೇವಕ ನಿಶಾಂತ್ ರವರು ಸದ್ದಿಲ್ಲದೆ ಸಂಘಟನೆ ಮಾಡುತ್ತಾ ಮುಂದಿನ ಚುನಾವಣೆಗೆ ತಯಾರಾಗುತ್ತಿದ್ದಾರೆ. ಇವರು ಎಲ್ಲಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿಲ್ಲ, ಆದರೆ ಇವರ ಸಂಘಟನೆ ಹಾಗೂ ಕಾರ್ಯವೈಖರಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂಬ ಮಾಹಿತಿ ಪತ್ರಿಕೆಗೆ ಬಲ್ಲ ಮೂಲಗಳಿಂದ ಖಚಿತವಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು .ಆದರೆ ಈ ಬಾರಿ ಟಿಕೆಟ್ ವಂಚಿತರು ಪಕ್ಷೇತರರಾಗಿ ಸ್ಪರ್ಧಿಸುವುದು ಖಚಿತವಾಗಿದ್ದು. ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರಲಿದೆ.

andolanait

Recent Posts

ಡಿ.24ರಂದು ಮಹಾಸಭಾದಿಂದ ಶಾಮನೂರು ನುಡಿ ನಮನ: ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ…

37 mins ago

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿಗೆ ಹೈಕೋರ್ಟ್‌ನಿಂದ ನೋಟಿಸ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ…

48 mins ago

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

2 hours ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

2 hours ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

2 hours ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

2 hours ago