ಜಿಲ್ಲೆಗಳು

ಸಮುದಾಯ ಆರೋಗ್ಯ ಅಧಿಕಾರಿಗಳ ಖಾಯಂಗೆ ಒತ್ತಾಯ

ಚಾಮರಾಜನಗರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಶಂಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಎಲ್ಲ ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಇವುಗಳ ನಿರ್ವಹಣೆಗೆ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಅಧಿಕಾರಿಗಳ ಜವಾಬ್ದಾರಿ, ಕರ್ತವ್ಯ ಹಾಗೂ ಕಾರ್ಯ ಚಟುವಟಿಕೆ ನಿಭಾಯಿಸಲು ಭಾರತ ಸರ್ಕಾರ ಪ್ರತ್ಯೇಕ ನಿಯಮಾವಳಿಯನ್ನು ರಚಿಸಿ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರನ್ವಯ ಕೇಂದ್ರಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು. ಆದರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಅಧಿಕಾರಿಗಳನ್ನು ಇತರೆ ಕೆಲಸಗಳಿಗೆ ಬಳಸುತ್ತಿದ್ದಾರೆ ಎಂದು ದೂರಿದರು.
ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನಮ್ಮಲ್ಲಿ ೮ ಸಾವಿರ ರೂ. ಪ್ರೋತ್ಸಾಹಧನ ವಿತರಿಸಲಾಗುತ್ತಿದೆ. ಇತರೆ ರಾಜ್ಯಗಳಲ್ಲಿ ೧೫ ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ. ನಮಗೂ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದರೂ ಇಲ್ಲಿಯವರೆಗೆ ಜನ್ ಆರೋಗ್ಯ ಸಮಿತಿಯನ್ನು ರಚಿಸಿಲ್ಲ. ಕೂಡಲೇ ರಚಿಸಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಕೇಂದ್ರದ ಮುಕ್ತ ನಿಧಿ ಹಾಗೂ ಅಧಿಕಾರಿಗಳ ಅನ್‌ಟೈಡ್ ನಿಧಿಯನ್ನು ಸಕಾಲಕ್ಕೆ ಬಿಡುಗಡೆ ಮಾಡದೆ ಶುಚಿತ್ವ ಕಾಪಾಡಲು ತೊಂದರೆಯಾಗಿದೆ ಎಂದು ದೂರಿದರು.
ನಾಳೆ ಪ್ರತಿಭಟನೆ: ಕೇಂದ್ರಗಳಲ್ಲಿ ಸರಿಯಾಗಿ ಔಷಧಗಳು ಮತ್ತು ಡಯಗ್ನೋಸ್ಟಿಕ್ ವ್ಯವಸ್ಥೆಯಿಲ್ಲ. ಈ ಬಗ್ಗೆ ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇಂತಹ ಧೋರಣೆ ಖಂಡಿಸಿ ನ.೧೮ ರಂದು ರಾಜ್ಯಾದ್ಯಂತ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಎದುರು ಸಾಂಕೇತಿಕ ಧರಣಿ ನಡಸಲಾಗುವುದು ಎಂದು ತಿಳಿಸಿದರು.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

8 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

12 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

13 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

13 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

13 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

14 hours ago