ಜಿಲ್ಲೆಗಳು

ಜಾಗೃತ ಗ್ರಾಹಕ ಸಮಾಜದ ಪ್ರಗತಿಗೆ ದಿಕ್ಸೂಚಿ: ಗೀತಾ ಪ್ರಸನ್ನ

ಮೈಸೂರು: ಜಾಗೃತ ಗ್ರಾಹಕರು ಸಮಾಜದ ಪ್ರಗತಿಯ ಮಾನದಂಡ ಎಂಬುದನ್ನು ಎಲ್ಲರೂ ನೆನಪಿಡಬೇಕು ಎಂದು ಉಪ ಪೊಲೀಸ್ ಆಯುಕ್ತರಾದ ಗೀತಾ ಪ್ರಸನ್ನ ಅಭಿಪ್ರಾಯಪಟ್ಟರು.
ಬುಧವಾರ ಶೇಷಾದ್ರಿ ಅಯ್ಯರ್ ರಸ್ತೆ, ಹಳೆ ಖಒಅ ಹತ್ತಿರ ಇರುವ ವಿದ್ಯಾವರ್ಧಕ ಕಾಲೇಜು ಆವರಣದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಹಕ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಹಕರು ಪ್ರತಿ ಖರೀದಿಯ ಮೇಲೆ ರಸೀದಿ ಪಡೆಯುವುದನ್ನು ರೂಢಿ ಮಾಡಿಕೊಳ್ಳಬೇಕು. ಈ ಹಿಂದೆ ಜನರು ಕಿರಾಣಿ ಅಂಗಡಿ, ಸೀಮೆಎಣ್ಣೆಯ ಅಳತೆ ವಿಷಯದಲ್ಲಿ ಮಾತ್ರ ಜಾಗೃತರಾಗಿದ್ದರು. ಇತ್ತೀಚೆಗೆ ಮೊದಲಿಗಿಂತಲೂ ಹೆಚ್ಚು ಜಾಗೃತರಾಗಿದ್ದಾರೆ. ಇದರಿಂದ ಸಮಾಜದ ಪ್ರಗತಿಯೂ ಸುಲಭವಾಗುತ್ತದೆ ಎಂದರು.
ಹುಟ್ಟಿನಿಂದಲೂ ಸಾಯುವ ಕೊನೆ ಕ್ಷಣದವರೆಗೆ ಪ್ರತಿ ವ್ಯಕ್ತಿಯೂ ಗ್ರಾಹಕನಾಗಿರುತ್ತಾನೆ. ಸಮಯ ಮತ್ತು ಸಂದರ್ಭಕ್ಕೆ ಅನುಗುಣವಾಗಿ ಆತ ಗ್ರಾಹಕನ ಪಾತ್ರ ನಿರ್ವಹಿಸುತ್ತಿರುತ್ತಾನೆ. ಹಾಗಾಗಿ, ಹೊಣೆಗಾರಿಕೆ ಅರಿತು ಗ್ರಾಹಕರ ಕಾಯಿದೆಯ ಜಾಗೃತಿ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಕಾನೂನುಗಳು ಎಲ್ಲರಿಗೂ ಅನ್ವಯವಾಗುತ್ತವೆ. ಆದರೆ, ತೋರಿಕೆಗೆ ಒಂದು ಉಪಯೋಗಕ್ಕೆ ಒಂದು ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಮನಸ್ಥಿತಿಯಿಂದ ಹೊರಬಂದು ಎಲ್ಲರೂ ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸುವ ಮತ್ತು ತಮ್ಮ ಜವಾಬ್ದಾರಿ ಪ್ರದರ್ಶಿಸುವಂತಾಗಬೇಕು ಎಂದರು.
ನಂತರ ಮಾತನಾಡಿದ ಕೇಂದ್ರೀಯ ಮಹಿಳಾ ಜಾಗರಣ ಪ್ರಮುಖರಾದ ಆಶಾಸಿಂಗ್, ಸಂಘಟನಾ ದೃಷ್ಟಿಯಿಂದ ಗ್ವಾಲಿಯರ್‌ನಿಂದ ಬಂದಿದ್ದೇನೆ. ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿರುವುದು ಸಂತಸ ತಂದಿದೆ. ಗ್ರಾಹಕ ಹಕ್ಕುಗಳನ್ನು ಸಾರ್ಥಕವಾಗಿ ಉಪಯೋಗಿಸಿಕೊಳ್ಳುತ್ತಾ ತಮ್ಮ ಸಮಸ್ಯೆಗಳನ್ನು ಜನರು ಸೂಕ್ತವಾಗಿ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾವರ್ಧಕ ಕಾನೂನು ಕಾಲೇಜಿನ ಖಜಾಂಚಿ ಶ್ರೀಶೈಲ ರಾಮಣ್ಣ, ಪ್ರೊ.ಕೆ.ಬಿ.ವಾಸುದೇವ, ಪ್ರಾಂಶುಪಾಲರಾದ ದೀಪು, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಮಹಿಳಾ ಪ್ರಮುಖ್ ಗಾಯತ್ರಿ ನಾಡಿಗ್, ಮೈಸೂರು ಘಟಕದ ಅಧ್ಯಕ್ಷ ಡಾ. ಜಿ.ವಿ.ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಮೈಸೂರು ವಲಯದ ಮಹಿಳಾ ಪ್ರಮುಖ ವಾಣಿ ಭಾಸ್ಕರ್, ಕಾರ್ಯದರ್ಶಿ ರಾಘವೇಂದ್ರ, ಲತಾ, ರವಿಶಂಕರ್ ವಕೀಲರಾದ ಶಿವರಾಜ್ ಇನ್ನಿತರರು ಹಾಜರಿದ್ದರು

ಮೈಸೂರು: ನಗರದ ಮೈಸೂರು-ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿವಾದ ಮತ್ತಷ್ಟು ಕಾವೇರಿದ್ದು, ನಿಲ್ದಾಣವನ್ನು ತೆರವುಗೊಳಿಸುವಂತೆ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅಧಿಕರಿಗಳು ನಗರಪಾಲಿಕೆಗೆ ನೋಟೀಸ್ ನಿಡಿದ್ದಾರೆ.
ಮಂಗಳವಾರ ಮೈಸೂರು ಮಹಾನಗರ ಪಾಲಿಕೆಗೆ ನೋಟೀಸ್ ನೀಡಿರುವ ಹೆದ್ದರಿ ಪ್ರಾದಿಕಾರದ ಅಧಿಕಾರಿಗಳು ಮೈಸೂರು-ನಂಜನಗೂಡು-ಊಟಿ ರಸ್ತೆಯು ನ್ಯಾಷನಲ್ ಹೈವೆಯ ೭೬೬ರ ವ್ಯಾಪ್ತಿಯಲ್ಲಿ ಬರಲಿದ್ದು, ಅಲ್ಲಿ ಅನುಮತಿ ಇಲ್ಲದೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಹೀಗಾಗಿ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ನೋಟೀಸ್‌ನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಬಂದೋಬಸ್ತ್: ಇದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಬಿಜೆಪಿ ಸಂಸದರೊಬ್ಬರು ಬಸ್ ನಿಲ್ದಾಣ ಮಸೀದಿಯ ಮಾದರಿಯಲ್ಲಿದೆ. ಅದನ್ನು ತೆರವುಗೊಳಿಸದಿದ್ದಲ್ಲಿ ನಾನೇ ಜೆಸಿಬಿ ಮೂಲಕ ತೆರವುಗೊಳಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಅವರ ಈ ಹೇಳಿಕೆ ಸರ್ಕಾರ ಅಥವ ಜಿಲ್ಲಾಡಳಿತಕ್ಕೆ ಮುಜುಗರ, ಆತಂಕ ತಂದಿರಬಹುದು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರ ಬೆಳಿಗ್ಗೆಯಿಂದಲೇ ಅಲ್ಲಿಗೆ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಪಾಳಿಯಲ್ಲಿ ಪೊಲೀಸರು ಬಸ್ ನಿಲ್ದಾಣವನ್ನು ಕಾಯುತ್ತಿದ್ದಾರೆ.
ನಾವು ಕಟ್ಟಿಸಿಲ್ಲ: ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಿಸಿರುವ ಬಸ್ ತಂಗುದಾಣಕ್ಕೆ ನಗರಪಾಲಿಕೆಯಿಂದ ಯಾವುದೇ ಅನುದಾನ ನೀಡಿಲ್ಲ. ಜೊತೆಗೆ ಸ್ಥಳವೂ ಕೂಡ ನಮ್ಮದಲ್ಲ. ಹೀಗಾಗಿ ಕಟ್ಟಡವನ್ನು ನಾವು ಕೆಡವುವ ಪ್ರಶ್ನೆಯೇ ಇಲ್ಲ ಎಂದು ನಗರಪಾಲಿಕೆ ಇಂಜಿನಿಯರುಗಳು ಹೇಳುತ್ತಾರೆ.
ಈ ಸಂಬಂದ ಪತ್ರಿಕೆಯೊಂದಿಗೆ ಮಾತನಾಡಿದ ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿರುವ ನೋಟೀಸ್ ನನಗೆ ತಲುಪಿಲ್ಲ. ನೋಟೀಸ್ ಪರಿಶೀಲಿಸಿದ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.

andolanait

Recent Posts

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

1 hour ago

ಜೂ.13ರಂದು ಡೋರ‍್ನಹಳ್ಳಿಯಲ್ಲಿ ಸಂತ ಅಂತೋಣಿ ಜಾತ್ರೆ

ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ…

1 hour ago

ಕೋಟೆಗೆ 15ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ

ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…

1 hour ago

ಬುಡಕಟ್ಟು ಜೀವನ ಬಿಚ್ಚಿಡುವ ಮ್ಯೂಸಿಯಂ!

ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…

1 hour ago

ಕಲಾಕೃತಿ ಮೂಲಕ ತ್ಯಾಜ್ಯ ನಿರ್ವಹಣಾ ಜಾಗೃತಿ

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…

2 hours ago