ಜಿಲ್ಲೆಗಳು

ಜಾಗೃತ ಗ್ರಾಹಕ ಸಮಾಜದ ಪ್ರಗತಿಗೆ ದಿಕ್ಸೂಚಿ: ಗೀತಾ ಪ್ರಸನ್ನ

ಮೈಸೂರು: ಜಾಗೃತ ಗ್ರಾಹಕರು ಸಮಾಜದ ಪ್ರಗತಿಯ ಮಾನದಂಡ ಎಂಬುದನ್ನು ಎಲ್ಲರೂ ನೆನಪಿಡಬೇಕು ಎಂದು ಉಪ ಪೊಲೀಸ್ ಆಯುಕ್ತರಾದ ಗೀತಾ ಪ್ರಸನ್ನ ಅಭಿಪ್ರಾಯಪಟ್ಟರು.
ಬುಧವಾರ ಶೇಷಾದ್ರಿ ಅಯ್ಯರ್ ರಸ್ತೆ, ಹಳೆ ಖಒಅ ಹತ್ತಿರ ಇರುವ ವಿದ್ಯಾವರ್ಧಕ ಕಾಲೇಜು ಆವರಣದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಏರ್ಪಡಿಸಲಾಗಿದ್ದ ಗ್ರಾಹಕ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಹಕರು ಪ್ರತಿ ಖರೀದಿಯ ಮೇಲೆ ರಸೀದಿ ಪಡೆಯುವುದನ್ನು ರೂಢಿ ಮಾಡಿಕೊಳ್ಳಬೇಕು. ಈ ಹಿಂದೆ ಜನರು ಕಿರಾಣಿ ಅಂಗಡಿ, ಸೀಮೆಎಣ್ಣೆಯ ಅಳತೆ ವಿಷಯದಲ್ಲಿ ಮಾತ್ರ ಜಾಗೃತರಾಗಿದ್ದರು. ಇತ್ತೀಚೆಗೆ ಮೊದಲಿಗಿಂತಲೂ ಹೆಚ್ಚು ಜಾಗೃತರಾಗಿದ್ದಾರೆ. ಇದರಿಂದ ಸಮಾಜದ ಪ್ರಗತಿಯೂ ಸುಲಭವಾಗುತ್ತದೆ ಎಂದರು.
ಹುಟ್ಟಿನಿಂದಲೂ ಸಾಯುವ ಕೊನೆ ಕ್ಷಣದವರೆಗೆ ಪ್ರತಿ ವ್ಯಕ್ತಿಯೂ ಗ್ರಾಹಕನಾಗಿರುತ್ತಾನೆ. ಸಮಯ ಮತ್ತು ಸಂದರ್ಭಕ್ಕೆ ಅನುಗುಣವಾಗಿ ಆತ ಗ್ರಾಹಕನ ಪಾತ್ರ ನಿರ್ವಹಿಸುತ್ತಿರುತ್ತಾನೆ. ಹಾಗಾಗಿ, ಹೊಣೆಗಾರಿಕೆ ಅರಿತು ಗ್ರಾಹಕರ ಕಾಯಿದೆಯ ಜಾಗೃತಿ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಕಾನೂನುಗಳು ಎಲ್ಲರಿಗೂ ಅನ್ವಯವಾಗುತ್ತವೆ. ಆದರೆ, ತೋರಿಕೆಗೆ ಒಂದು ಉಪಯೋಗಕ್ಕೆ ಒಂದು ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಮನಸ್ಥಿತಿಯಿಂದ ಹೊರಬಂದು ಎಲ್ಲರೂ ಕಾನೂನಿನ ಅಡಿಯಲ್ಲಿಯೇ ಕಾರ್ಯನಿರ್ವಹಿಸುವ ಮತ್ತು ತಮ್ಮ ಜವಾಬ್ದಾರಿ ಪ್ರದರ್ಶಿಸುವಂತಾಗಬೇಕು ಎಂದರು.
ನಂತರ ಮಾತನಾಡಿದ ಕೇಂದ್ರೀಯ ಮಹಿಳಾ ಜಾಗರಣ ಪ್ರಮುಖರಾದ ಆಶಾಸಿಂಗ್, ಸಂಘಟನಾ ದೃಷ್ಟಿಯಿಂದ ಗ್ವಾಲಿಯರ್‌ನಿಂದ ಬಂದಿದ್ದೇನೆ. ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿರುವುದು ಸಂತಸ ತಂದಿದೆ. ಗ್ರಾಹಕ ಹಕ್ಕುಗಳನ್ನು ಸಾರ್ಥಕವಾಗಿ ಉಪಯೋಗಿಸಿಕೊಳ್ಳುತ್ತಾ ತಮ್ಮ ಸಮಸ್ಯೆಗಳನ್ನು ಜನರು ಸೂಕ್ತವಾಗಿ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾವರ್ಧಕ ಕಾನೂನು ಕಾಲೇಜಿನ ಖಜಾಂಚಿ ಶ್ರೀಶೈಲ ರಾಮಣ್ಣ, ಪ್ರೊ.ಕೆ.ಬಿ.ವಾಸುದೇವ, ಪ್ರಾಂಶುಪಾಲರಾದ ದೀಪು, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಮಹಿಳಾ ಪ್ರಮುಖ್ ಗಾಯತ್ರಿ ನಾಡಿಗ್, ಮೈಸೂರು ಘಟಕದ ಅಧ್ಯಕ್ಷ ಡಾ. ಜಿ.ವಿ.ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಮೈಸೂರು ವಲಯದ ಮಹಿಳಾ ಪ್ರಮುಖ ವಾಣಿ ಭಾಸ್ಕರ್, ಕಾರ್ಯದರ್ಶಿ ರಾಘವೇಂದ್ರ, ಲತಾ, ರವಿಶಂಕರ್ ವಕೀಲರಾದ ಶಿವರಾಜ್ ಇನ್ನಿತರರು ಹಾಜರಿದ್ದರು

ಮೈಸೂರು: ನಗರದ ಮೈಸೂರು-ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣದ ವಿವಾದ ಮತ್ತಷ್ಟು ಕಾವೇರಿದ್ದು, ನಿಲ್ದಾಣವನ್ನು ತೆರವುಗೊಳಿಸುವಂತೆ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ ಅಧಿಕರಿಗಳು ನಗರಪಾಲಿಕೆಗೆ ನೋಟೀಸ್ ನಿಡಿದ್ದಾರೆ.
ಮಂಗಳವಾರ ಮೈಸೂರು ಮಹಾನಗರ ಪಾಲಿಕೆಗೆ ನೋಟೀಸ್ ನೀಡಿರುವ ಹೆದ್ದರಿ ಪ್ರಾದಿಕಾರದ ಅಧಿಕಾರಿಗಳು ಮೈಸೂರು-ನಂಜನಗೂಡು-ಊಟಿ ರಸ್ತೆಯು ನ್ಯಾಷನಲ್ ಹೈವೆಯ ೭೬೬ರ ವ್ಯಾಪ್ತಿಯಲ್ಲಿ ಬರಲಿದ್ದು, ಅಲ್ಲಿ ಅನುಮತಿ ಇಲ್ಲದೆ ಯಾವುದೇ ಕಟ್ಟಡ ನಿರ್ಮಿಸುವಂತಿಲ್ಲ. ಹೀಗಾಗಿ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ನೋಟೀಸ್‌ನಲ್ಲಿ ತಿಳಿಸಿದ್ದಾರೆ.
ಪೊಲೀಸ್ ಬಂದೋಬಸ್ತ್: ಇದು ನಿಜಕ್ಕೂ ಆಶ್ಚರ್ಯಕರ ಸಂಗತಿ. ಬಿಜೆಪಿ ಸಂಸದರೊಬ್ಬರು ಬಸ್ ನಿಲ್ದಾಣ ಮಸೀದಿಯ ಮಾದರಿಯಲ್ಲಿದೆ. ಅದನ್ನು ತೆರವುಗೊಳಿಸದಿದ್ದಲ್ಲಿ ನಾನೇ ಜೆಸಿಬಿ ಮೂಲಕ ತೆರವುಗೊಳಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಅವರ ಈ ಹೇಳಿಕೆ ಸರ್ಕಾರ ಅಥವ ಜಿಲ್ಲಾಡಳಿತಕ್ಕೆ ಮುಜುಗರ, ಆತಂಕ ತಂದಿರಬಹುದು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರ ಬೆಳಿಗ್ಗೆಯಿಂದಲೇ ಅಲ್ಲಿಗೆ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಪಾಳಿಯಲ್ಲಿ ಪೊಲೀಸರು ಬಸ್ ನಿಲ್ದಾಣವನ್ನು ಕಾಯುತ್ತಿದ್ದಾರೆ.
ನಾವು ಕಟ್ಟಿಸಿಲ್ಲ: ಮೈಸೂರು-ಊಟಿ ರಸ್ತೆಯಲ್ಲಿ ನಿರ್ಮಿಸಿರುವ ಬಸ್ ತಂಗುದಾಣಕ್ಕೆ ನಗರಪಾಲಿಕೆಯಿಂದ ಯಾವುದೇ ಅನುದಾನ ನೀಡಿಲ್ಲ. ಜೊತೆಗೆ ಸ್ಥಳವೂ ಕೂಡ ನಮ್ಮದಲ್ಲ. ಹೀಗಾಗಿ ಕಟ್ಟಡವನ್ನು ನಾವು ಕೆಡವುವ ಪ್ರಶ್ನೆಯೇ ಇಲ್ಲ ಎಂದು ನಗರಪಾಲಿಕೆ ಇಂಜಿನಿಯರುಗಳು ಹೇಳುತ್ತಾರೆ.
ಈ ಸಂಬಂದ ಪತ್ರಿಕೆಯೊಂದಿಗೆ ಮಾತನಾಡಿದ ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನೀಡಿರುವ ನೋಟೀಸ್ ನನಗೆ ತಲುಪಿಲ್ಲ. ನೋಟೀಸ್ ಪರಿಶೀಲಿಸಿದ ಬಳಿಕ ಮಾತನಾಡುತ್ತೇನೆ ಎಂದು ಹೇಳಿದರು.

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

2 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

2 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

2 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

3 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

3 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

3 hours ago