ಜಿಲ್ಲೆಗಳು

ಮೌಢ್ಯ ಆಚರಣೆಯಿಂದಾಗಿ ಸಮಾಜ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ : ಸುಭಾಷ್ ಮಾಡ್ರಹಳ್ಳಿ

ಗುಂಡ್ಲುಪೇಟೆ : ಆಧುನಿಕ ಸಂಧರ್ಭದಲ್ಲೂ ನಾವು ಮೌಢ್ಯ ಆಚರಣೆಗೆ ಬೆನ್ನು ಹತ್ತಿ ಅನೇಕ ಸಮಸ್ಯೆಗಳನ್ನು ಸಮಾಜ ಎದುರಿಸುತ್ತಿರುವವುದನ್ನ ಕಾಣಬಹುದು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರು ಆದ ಸುಭಾಷ್ ಮಾಡ್ರಹಳ್ಳಿ ಹೇಳಿದರು. ಅವರು ಮಾನವ ಬಂಧುತ್ವ ವೇದಿಕೆ ಹಾಗೂ ಸಿ ಎಂ ಎಸ್ ಚಿಲ್ಡ್ರನ್ಸ್ ಹೋಮ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾಗರ ಪಂಚಮಿ ಅಂಗವಾಗಿ ಬಸವ ಪಂಚಮಿ ಆಚರಣೆ ಮಾಡುತ್ತ ಕಳೆದ ಹತ್ತು ವರ್ಷಗಳಿಂದಲೂ ಮೌಢ್ಯದ ವಿರುದ್ಧ ಜನ ಜಾಗೃತಿ ಮೂಡಿಸುವ ಸಲುವಾಗಿ ಹಾಲು ಹಾಗೂ ಪೌಷ್ಟಿಕಾಂಶ ಯುಕ್ತ ತಿನಿಸುಗಳನ್ನು ಪೋಲು ಮಾಡದೆ ನಮ್ಮ ನಡುವಿನ ಅಂದ ಮಕ್ಕಳು ,ಅಸಹಾಯಕರು , ಹಾಗೂ ನಿರ್ಗತಿಕರಿಗೆ ನೀಡಿದರೆ ಸಂತೃಪ್ತಿಯ ಭಾವ ಕಾಣಬಹುದು.
ದುರಂತ ನಾವು ಧಾರ್ಮಿಕ ಶ್ರದ್ಧೆ ,ನಂಬಿಕೆ ಹಾಗೂ ಆಚರಣೆ ನೆಪದಲ್ಲಿ ಲಕ್ಷಾಂತರ ಲೀಟರ್ ಹಾಲನ್ನು ಹುತ್ತಕ್ಕೆ ಎರೆಯುವ ಮೂಲಕ ಪೋಲು ಮಾಡಲಾಗುತ್ತಿದೆ .

ಕಣ್ಣಿಗೆ ಕಾಣುವ ದೇವರೆಂದರೆ ಮಕ್ಕಳೇ ಆಗಿವೆ ಹಾಗಾಗಿ ಹುತ್ತಕ್ಕೆ ಹಾಲು ಎರೆಯುವ ಬದಲಾಗಿ ಹಾಲನ್ನು ಕುಡಿಯುವ ಹಬ್ಬವನ್ನಾಗಿ ಪರಿವರ್ತಿಸಿ ಪೌಷ್ಟಿಕ ಆಹಾರವನ್ನು ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ಮಾನವ ಬಂಧುತ್ವ ವೇದಿಕೆ ಯ ತಾಲ್ಲೂಕು ಸಂಚಾಲಕ ಆರ್ .ಸೋಮಣ್ಣ , ಕಾವಲು ಪಡೆ ತಾ ಅಧ್ಯಕ್ಷ ರಾದ ಅಬ್ದುಲ್ ಮಾಲಿಕ್ , ಮಾಧು , ರಾಮೇಗೌಡ , ಕವಿ ಮದ್ದಯ್ಯನಹುಂಡಿ ನಾಗರಾಜ್ , ಸಂಸ್ಥೆಯ ವ್ಯವಸ್ಥಾಪಕರಾದ ಸೆಲ್ವ ರಾಜ್ , ಕೆ ಎಂ ಮನಸ್ ಮಂಜುಳಾ ಹಾಗೂ ರವಿ ಹಾಗೂ ವಿದ್ಯಾರ್ಥಿ , ವಿದ್ಯಾರ್ಥಿನಿಯರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago