ಗುಂಡ್ಲುಪೇಟೆ : ಆಧುನಿಕ ಸಂಧರ್ಭದಲ್ಲೂ ನಾವು ಮೌಢ್ಯ ಆಚರಣೆಗೆ ಬೆನ್ನು ಹತ್ತಿ ಅನೇಕ ಸಮಸ್ಯೆಗಳನ್ನು ಸಮಾಜ ಎದುರಿಸುತ್ತಿರುವವುದನ್ನ ಕಾಣಬಹುದು ಎಂದು ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕರು ಆದ ಸುಭಾಷ್ ಮಾಡ್ರಹಳ್ಳಿ ಹೇಳಿದರು. ಅವರು ಮಾನವ ಬಂಧುತ್ವ ವೇದಿಕೆ ಹಾಗೂ ಸಿ ಎಂ ಎಸ್ ಚಿಲ್ಡ್ರನ್ಸ್ ಹೋಮ್ಸ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಾಗರ ಪಂಚಮಿ ಅಂಗವಾಗಿ ಬಸವ ಪಂಚಮಿ ಆಚರಣೆ ಮಾಡುತ್ತ ಕಳೆದ ಹತ್ತು ವರ್ಷಗಳಿಂದಲೂ ಮೌಢ್ಯದ ವಿರುದ್ಧ ಜನ ಜಾಗೃತಿ ಮೂಡಿಸುವ ಸಲುವಾಗಿ ಹಾಲು ಹಾಗೂ ಪೌಷ್ಟಿಕಾಂಶ ಯುಕ್ತ ತಿನಿಸುಗಳನ್ನು ಪೋಲು ಮಾಡದೆ ನಮ್ಮ ನಡುವಿನ ಅಂದ ಮಕ್ಕಳು ,ಅಸಹಾಯಕರು , ಹಾಗೂ ನಿರ್ಗತಿಕರಿಗೆ ನೀಡಿದರೆ ಸಂತೃಪ್ತಿಯ ಭಾವ ಕಾಣಬಹುದು.
ದುರಂತ ನಾವು ಧಾರ್ಮಿಕ ಶ್ರದ್ಧೆ ,ನಂಬಿಕೆ ಹಾಗೂ ಆಚರಣೆ ನೆಪದಲ್ಲಿ ಲಕ್ಷಾಂತರ ಲೀಟರ್ ಹಾಲನ್ನು ಹುತ್ತಕ್ಕೆ ಎರೆಯುವ ಮೂಲಕ ಪೋಲು ಮಾಡಲಾಗುತ್ತಿದೆ .
ಕಣ್ಣಿಗೆ ಕಾಣುವ ದೇವರೆಂದರೆ ಮಕ್ಕಳೇ ಆಗಿವೆ ಹಾಗಾಗಿ ಹುತ್ತಕ್ಕೆ ಹಾಲು ಎರೆಯುವ ಬದಲಾಗಿ ಹಾಲನ್ನು ಕುಡಿಯುವ ಹಬ್ಬವನ್ನಾಗಿ ಪರಿವರ್ತಿಸಿ ಪೌಷ್ಟಿಕ ಆಹಾರವನ್ನು ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.
ಈ ಸಂಧರ್ಭದಲ್ಲಿ ಮಾನವ ಬಂಧುತ್ವ ವೇದಿಕೆ ಯ ತಾಲ್ಲೂಕು ಸಂಚಾಲಕ ಆರ್ .ಸೋಮಣ್ಣ , ಕಾವಲು ಪಡೆ ತಾ ಅಧ್ಯಕ್ಷ ರಾದ ಅಬ್ದುಲ್ ಮಾಲಿಕ್ , ಮಾಧು , ರಾಮೇಗೌಡ , ಕವಿ ಮದ್ದಯ್ಯನಹುಂಡಿ ನಾಗರಾಜ್ , ಸಂಸ್ಥೆಯ ವ್ಯವಸ್ಥಾಪಕರಾದ ಸೆಲ್ವ ರಾಜ್ , ಕೆ ಎಂ ಮನಸ್ ಮಂಜುಳಾ ಹಾಗೂ ರವಿ ಹಾಗೂ ವಿದ್ಯಾರ್ಥಿ , ವಿದ್ಯಾರ್ಥಿನಿಯರು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…
ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…