ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೊ ತಜ್ಞರ ತಂಡ ಭೇಟಿ

ತಿ.ನರಸೀಪುರ:  ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

8 mins ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

1 hour ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

1 hour ago

ಅಯ್ಯಪ್ಪಸ್ವಾಮಿ ಭಕ್ತರಿಗೆ ಮುಖ್ಯ ಮಾಹಿತಿ: ಡಿಸೆಂಬರ್.‌27ರಂದು ಶಬರಿಮಲೆಯಲ್ಲಿ ಮಂಡಲ ಪೂಜೆ

ಕೇರಳ: ಶ್ರೀಕ್ಷೇತ್ರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಡಿಸೆಂಬರ್.‌27ರಂದು ಅಯ್ಯಪ್ಪ ಸ್ವಾಮಿಗೆ ಮಂಡಲ ಪೂಜೆ ನೆರವೇರಿಸಲಾಗುವುದು. ಅಂದು ಬೆಳಿಗ್ಗೆ 10.10ರಿಂದ 11.30ರವರೆಗಿನ…

2 hours ago

ಕಿಚ್ಚ ಸುದೀಪ್‌ ಯುದ್ಧದ ಮಾತಿಗೆ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಟಾಂಗ್‌

ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್ ಡಿಸೆಂಬರ್.‌25ರಂದು ಬಿಡುಗಡೆಯಾಗಲಿದೆ. ಹುಬ್ಬಳ್ಳಿಯಲ್ಲಿ ನಡೆದ ಚಿತ್ರದ ಪ್ರೀ ರಿಲೀಸ್‌ ಇವೆಂಟ್‌ ಕಾರ್ಯಕ್ರಮದಲ್ಲಿ ಸುದೀಪ್‌…

2 hours ago

ಸಮ ಸಮಾಜಕ್ಕಾಗಿ ಬಡಿದಾಡಿದ ಸಮಾಜವಾದಿಯ ಕತೆ

ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ…

3 hours ago