ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೊ ತಜ್ಞರ ತಂಡ ಭೇಟಿ

ತಿ.ನರಸೀಪುರ:  ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

8 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

8 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

9 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

9 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

9 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

10 hours ago