ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೊ ತಜ್ಞರ ತಂಡ ಭೇಟಿ

ತಿ.ನರಸೀಪುರ:  ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago