ಜಿಲ್ಲೆಗಳು

ಸೋಮನಾಥಪುರ ಕೇಶವ ದೇವಾಲಯಕ್ಕೆ ಯುನೆಸ್ಕೊ ತಜ್ಞರ ತಂಡ ಭೇಟಿ

ತಿ.ನರಸೀಪುರ:  ತಾಲೂಕಿನ ಸೋಮನಾಥಪುರದಲ್ಲಿರುವ ಕೇಶವ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸುವ ಉದ್ದೇಶದಿಂದ ಟಿಯಾಂಗ್ ಕಿಯಾನ್ ಬೂನ್ ನೇತೃತ್ವದ ಯುನೆಸ್ಕೋ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿತು.

ವೇಸರ ಶೈಲಿಯಲ್ಲಿರುವ ದೇವಾಲಯವು ಹೊಯ್ಸಳ ಕಾಲದಲ್ಲಿ ನಿರ್ಮಾಣವಾಗಿದ್ದು,ಶಿಲ್ಪಕಲೆಯಲ್ಲಿ ಅದ್ಭುತ ರಚನೆ ಆಗಿದೆ.ನಾಲ್ಕು ಪುರುಷಾರ್ಥಗಳನ್ನು ಬಳಪದ ಕಲ್ಲಿನಲ್ಲಿ ಕೆತ್ತನೆ ಮಾಡಿ ಶಿಲ್ಪಕಲೆಯಲ್ಲಿ ನೈಪುಣ್ಯ ಮೆರೆಯಲಾಗಿದೆ.
ಗರ್ಭಗುಡಿಪ್ರಾಂಗಣ,ಕೆತ್ತನೆ ಕುಸುರಿ ಮತ್ತು ಅದ್ಭುತ ಕದಳಿ ಹಣ್ಣಿನ ಚಿತ್ರಗಳನ್ನು ತಜ್ಞರ ತಂಡ ವೀಕ್ಷಿಸಿದರು.

ಟಿಯಾಂಗ್ ಕಿಯಾನ್ ಬೂನ್ ಅವರಿಗೆ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ಹಾಗೂ ಭಾರತೀಯ ಪ್ರಾಚ್ಯವಸ್ತು ಸಂಗ್ರಹಾಲಯ ಮತ್ತು ರಾಜ್ಯ ಪ್ರಾಚ್ಯ ವಸ್ತು ಅಧಿಕಾರಿಗಳು ದೇವಾಲಯದ ಶಿಲ್ಪಕಲೆ, ಐತಿಹ್ಯಗಳು ಹಾಗೂ ಹೊಯ್ಸಳರ ಕಾಲದ ಶಿಲ್ಪಕಲೆ,ಕುಸುರಿ ಕೆತ್ತನೆ ಗಳ ಬಗ್ಗೆ ವಿವರಣೆ ನೀಡಿದರು.

ದೇವಾಲದಲ್ಲಿರುವ ಬಳಪದ ಕಲ್ಲಿನಲ್ಲಿ ಅತ್ಯಂತ ಸೂಕ್ಷ್ಮ ಕೆತ್ತನೆಯ ಕಲಾ ನೈಪುಣ್ಯತೆ, ಮದನಿಕೆಯರ ಶಿಲ್ಪಗಳು, ನಾಟ್ಯ ಭಂಗಿಗಳು, ಮದನಿಕಾ ವಿಗ್ರಹಗಳು (ಆಕರ್ಷಕವಾದ ಸೊಗಸಾದ ನಾಟ್ಯ ಭಂಗಿಗಳು)
ಶಿಲ್ಪ ಕಲೆ,ನಾಜೂಕಿನ, ಕುಸುರಿ ಕೆಲಸಗಳನ್ನು ಅತ್ಯಂತ ಆಸಕ್ತಿಯಿಂದ ಗಮನಿಸಿದ ಟಿಯಾಂಗ್ ಕಿಯಾನ್ ಬೂನ್ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡಲಾಗುವುದು,ಉನ್ನತಮಟ್ಟದ ಸಮಿತಿಯು ನಿರ್ಧಾರ ಕೈಗೊಳ್ಳಲಿದೆ ಎಂದರು

ನಂತರ ಸ್ಥಳೀಯರೊಂದಿಗೆ ಸಭೆ ನಡೆಸಿ ಸಾರ್ವಜನಿಕ ಅಭಿಪ್ರಾಯವನ್ನು ತಿಳಿದುಕೊಳ್ಳಲಾಯಿತು.ಟಿಯಾಂಗ್ ಕಿಯಾನ್ ಬೂನ್ ರವರು, ದೇವಾಲಯವು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರುವುದರಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾ ಮೂರ್ತಿ ಮಾತನಾಡಿ,ಈ ದೇವಾಲಯ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಯಾದಲ್ಲಿ ವಿಶ್ವಮಟ್ಟದಲ್ಲಿ ಹೆಸರುವಾಸಿಯಾಗುತ್ತದೆ. ನಾನಾ ದೇಶಗಳಿಂದ ಹಲವು ಪ್ರವಾಸಿಗರು ಇಲ್ಲಿಗೆ ಆಗಮಿಸುವರು. ಹಾಗಾಗಿ ಇಲ್ಲಿನ ಜನರ ವ್ಯಾಪಾರ ವಹಿವಾಟು ಹೆಚ್ಚಾಗಿ ಸ್ಥಳೀಯರು ಆರ್ಥಿಕ ಸಬಲತೆ ಹೊಂದಬಹುದು ಎಂದು ತಿಳಿಸಿದರು,

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

6 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

9 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

9 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

9 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

10 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

10 hours ago