ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿ
ಚಾಮರಾಜನಗರ: ಬಿಜೆಪಿ ಸಂಚಾರಿ ಸೇವಾ ಸಿಂಧು ವಾಹನದ ಮೂಲಕ ಉಚಿತ ಸೇವೆಗೆ ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಕೆಲವು ಮುಖಂಡರು ಅಡ್ಡಿಪಡಿಸಿ ಘಟನೆ ಸೋಮವಾರ ನಡೆದಿದೆ.
ಬಡಾವಣೆಯಲ್ಲಿ ಸಾರ್ವಜನಿಕರಿಗೆ ಉಚಿತ ಸೇವೆ ನೀಡಲು ಮುಂದಾದ ವಾಹನವನ್ನು ಬಡಾವಣೆಯ ನಗರಸಭೆ ಮಾಜಿ ಸದಸ್ಯ ಮಹದೇವಯ್ಯ ಮತ್ತು ಇತರರು ತಡೆದು ಚಾಲಕರು ಮತ್ತು ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣ ಠಾಣೆಯ ಪೊಲೀಸರು ಮುಖಂಡರನ್ನು ಸಮಾಧಾನ ಪಡಿಸಿದ್ದಾರೆ.
೨ ಸೇವಾ ಸಿಂಧು ವಾಹನಗಳಲ್ಲಿ ಬಡಾವಣೆಗೆ ತೆರಳಿದ್ದ ನಾಲ್ವರು ಸಿಬ್ಬಂದಿಯನ್ನು ಪ್ರಶ್ನಿಸಿದ ಮುಖಂಡರು, ಸಾರ್ವಜನಿಕ ಸೇವೆಯನ್ನು ನೀಡುವುದಕ್ಕೆ ನೀವು ಯಾರು. ನಮ್ಮ ಕೆಲಸವನ್ನು ನಾವು ಮಾಡಿಕೊಳ್ಳಲಿದ್ದೇವೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಚಿತ ಸೇವೆಯನ್ನು ನೀಡಲು ಅವರು ಯಾರು ಅಂತ ಕೇಳಿ ಎಂದು ನಮ್ಮ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಹೇಳಿದ್ದಾರೆ ಎಂದು ಮುಖಂಡರು ತಕರಾರು ತೆಗೆದಿದ್ದಾರೆ. ಮುಖಂಡರ ವರ್ತನೆಯನ್ನು ಸಿಬ್ಬಂದಿ ಖಂಡಿಸುತ್ತಿದ್ದAತೆ ಹಲ್ಲೆಗೆ ಮುಂದಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪಟ್ಟಣ ಠಾಣೆಯ ಪೋಲಿಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ನಂತರ ಸ್ಥಳಕ್ಕೆ ನಗರ ಸಭೆಯ ಮತ್ತು ಕಂದಾಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿ ವಾಹನ ಮತ್ತು ನಮ್ಮ ಉಚಿತ ಸೇವೆಯ ಮಾಹಿತಿಯನ್ನು ಪರಿಶೀಲಿಸಿದರು. ಈ ಘಟನೆ ಬಗ್ಗೆ ಪಟ್ಟಣ ಪೊಲೀಸ್ ಠಾಣೆಗೆ ವಾಹನದ ಚಾಲಕ ಲಿಂಗರಾಜು ದೂರು ದಾಖಲಿಸಿದ್ದಾರೆ.
ಸಾರ್ವಜನಿಕರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಸಹಿಸದೆ ಕೆಲವರು ಸೇವಾ ಸಿಂಧು ವಾಹನ ಹಾಗೂ ಆಪರೇಟರ್ ಮೇಲೆ ಹಲ್ಲೆ ಮಾಡಲು ಯತ್ನಿಸಿರುವುದು ಸರಿಯಲ್ಲ ಎಂದು ಸೇವಾ ಸಿಂಧು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಕಾಡಾಧ್ಯಕ್ಷ ಜಿ.ನಿಜಗುಣರಾಜು ಖಂಡಿಸಿದ್ದಾರೆ.
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…