ಜಿಲ್ಲೆಗಳು

ಸೋಮವಾರಪೇಟೆಯಲ್ಲಿ ಬಿಜೆಪಿಯ ಸೇವಾ ಸಿಂಧುಗೆ ಅಡ್ಡಿ

ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿ

ಚಾಮರಾಜನಗರ: ಬಿಜೆಪಿ ಸಂಚಾರಿ ಸೇವಾ ಸಿಂಧು ವಾಹನದ ಮೂಲಕ ಉಚಿತ ಸೇವೆಗೆ ನಗರದ ಸೋಮವಾರಪೇಟೆ ಬಡಾವಣೆಯಲ್ಲಿ ಕೆಲವು ಮುಖಂಡರು ಅಡ್ಡಿಪಡಿಸಿ ಘಟನೆ ಸೋಮವಾರ ನಡೆದಿದೆ.
ಬಡಾವಣೆಯಲ್ಲಿ ಸಾರ್ವಜನಿಕರಿಗೆ ಉಚಿತ ಸೇವೆ ನೀಡಲು ಮುಂದಾದ ವಾಹನವನ್ನು ಬಡಾವಣೆಯ ನಗರಸಭೆ ಮಾಜಿ ಸದಸ್ಯ ಮಹದೇವಯ್ಯ ಮತ್ತು ಇತರರು ತಡೆದು ಚಾಲಕರು ಮತ್ತು ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣ ಠಾಣೆಯ ಪೊಲೀಸರು ಮುಖಂಡರನ್ನು ಸಮಾಧಾನ ಪಡಿಸಿದ್ದಾರೆ.
೨ ಸೇವಾ ಸಿಂಧು ವಾಹನಗಳಲ್ಲಿ ಬಡಾವಣೆಗೆ ತೆರಳಿದ್ದ ನಾಲ್ವರು ಸಿಬ್ಬಂದಿಯನ್ನು ಪ್ರಶ್ನಿಸಿದ ಮುಖಂಡರು, ಸಾರ್ವಜನಿಕ ಸೇವೆಯನ್ನು ನೀಡುವುದಕ್ಕೆ ನೀವು ಯಾರು. ನಮ್ಮ ಕೆಲಸವನ್ನು ನಾವು ಮಾಡಿಕೊಳ್ಳಲಿದ್ದೇವೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಚಿತ ಸೇವೆಯನ್ನು ನೀಡಲು ಅವರು ಯಾರು ಅಂತ ಕೇಳಿ ಎಂದು ನಮ್ಮ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಹೇಳಿದ್ದಾರೆ ಎಂದು ಮುಖಂಡರು ತಕರಾರು ತೆಗೆದಿದ್ದಾರೆ. ಮುಖಂಡರ ವರ್ತನೆಯನ್ನು ಸಿಬ್ಬಂದಿ ಖಂಡಿಸುತ್ತಿದ್ದAತೆ ಹಲ್ಲೆಗೆ ಮುಂದಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪಟ್ಟಣ ಠಾಣೆಯ ಪೋಲಿಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
ನಂತರ ಸ್ಥಳಕ್ಕೆ ನಗರ ಸಭೆಯ ಮತ್ತು ಕಂದಾಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿ ವಾಹನ ಮತ್ತು ನಮ್ಮ ಉಚಿತ ಸೇವೆಯ ಮಾಹಿತಿಯನ್ನು ಪರಿಶೀಲಿಸಿದರು. ಈ ಘಟನೆ ಬಗ್ಗೆ ಪಟ್ಟಣ ಪೊಲೀಸ್ ಠಾಣೆಗೆ ವಾಹನದ ಚಾಲಕ ಲಿಂಗರಾಜು ದೂರು ದಾಖಲಿಸಿದ್ದಾರೆ.
ಸಾರ್ವಜನಿಕರಿಗೆ ಉಚಿತವಾಗಿ ಸೇವೆ ಸಲ್ಲಿಸುತ್ತಿರುವುದನ್ನು ಸಹಿಸದೆ ಕೆಲವರು ಸೇವಾ ಸಿಂಧು ವಾಹನ ಹಾಗೂ ಆಪರೇಟರ್ ಮೇಲೆ ಹಲ್ಲೆ ಮಾಡಲು ಯತ್ನಿಸಿರುವುದು ಸರಿಯಲ್ಲ ಎಂದು ಸೇವಾ ಸಿಂಧು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಕಾಡಾಧ್ಯಕ್ಷ ಜಿ.ನಿಜಗುಣರಾಜು ಖಂಡಿಸಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

11 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

11 hours ago