ಸೋಮವಾರಪೇಟೆ: ಟೀಮ್ ೧೨ ಆಫ್ ರೋಡರ್ಸ್ ಮತ್ತು ವೈಟ್ ಲೋಟಸ್ ಎಂಟರ್ಟ್ರೈನರ್ ವತಿಯಿಂದ ತಾಲ್ಲೂಕಿನ ಬೆಟ್ಟದಳ್ಳಿ ಗ್ರಾಮ ಪಂಚಾಯಿತಿಯ ಗ್ರಾಮೀಣ ಭಾಗದಲ್ಲಿ ನಡೆದ ಜೀಪ್ ಆಫ್ರೋಡ್ ರ್ಯಾಲಿ ಗ್ರಾಮೀಣ ಜನರನ್ನು ರಂಜಿಸಿತು. ಬೆಂಕಳ್ಳಿ ಗ್ರಾಮದಲ್ಲಿ ಹೊಳೆಯೊಳಗೆ ವಾಹನ ಚಾಲನೆಯನ್ನು ಗ್ರಾಮದ ಮಹಿಳೆ, ಪುರುಷರು, ಮಕ್ಕಳು, ವೃದ್ದರು ಕಣ್ತಂಬಿಕೊಂಡು ಸಂಭ್ರಮಿಸಿದರು. ಅತೀ ಹೆಚ್ಚು ಮಳೆಬೀಳುವ ಕುಡಿಗಾಣ ಗ್ರಾಮದ ಕೊಂಕಿನಬೆಟ್ಟವೇರುವುದು ಚಾಲಕರಿಗೆ ಸವಾಲಾಗಿ ಪರಿಣಮಿಸಿತು. ಕೆಸಿನ ಹಡ್ಲು ಎಂಬ ಸ್ಥಳದಲ್ಲಿ ಬಹುತೇಕ ವಾಹನಗಳು ಹೂತುಕೊಂಡವು. ನಂತರ ಟ್ರಾಕ್ಟರ್ ಮತ್ತು ಕ್ರೇನ್ ಬಳಸಿ ವಾಹನಗಳನ್ನು ಟ್ರ್ಯಾಕ್ಗಳಿಗೆ ತರಲಾಯಿತು.
ಕಠಿಣ ರಸ್ತೆಯಲ್ಲಿ ಜೀಪು ಓಡಿಸುವುದು ಚಾಲೆಂಜಿಂಗ್ ಆಗಿತ್ತು. ಕೊಡಗಿನ ಪ್ರಕೃತಿಯನ್ನು ಕಣ್ತುಂಬಿಕೊಳ್ಳುವುದೇ ಒಂದು ಸಂಭ್ರಮ. ಕುಟುಂಬ ಸಮೇತ ಬಂದಿದ್ದೇವೆ. ಬೆಂಗಳೂರಿನಿಂದ ಹೆಚ್ಚಿನ ಸ್ನೇಹಿತರು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಕೊಡಗಿನ ಪ್ರಕೃತಿ ರಕ್ಷಣೆ ಆಗಬೇಕು. ಪ್ರವಾಸೋದ್ಯಮಕ್ಕೆ ಹೆಚ್ಚಿನ ಅದ್ಯತೆ ನೀಡಬೇಕು. ಒಮ್ಮೆ ಬಂದು ಪ್ರಕೃತಿ ಸೌಂದರ್ಯ ನೋಡಿದವರು ಮುಂದೆಂದೂ ಮರೆಯಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ರ್ಯಾಲಿ ಪಟು ವಿಜಯ್ ಅವರು ಆಂದೋಲನದೊಟ್ಟಿಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…