ಜಿಲ್ಲೆಗಳು

‘ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ’

 

ನ.12, 20 ಹಾಗೂ ಡಿ.3, 4 ರಂದು ಅವಕಾಶ; ಸುದ್ದಿಗೋಷ್ಠಿಯಲ್ಲಿ ಡಿಸಿ ರಮೇಶ್ ಮಾಹಿತಿ

ಚಾಮರಾಜನಗರ: ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ನ.೯ ರಂದು ಪ್ರಚಾರ ಮಾಡಲಾಗಿದ್ದು, ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನವನ್ನು ನ.೧೨ ಮತ್ತು ೨೦ ಮತ್ತು ಡಿ.೩ ಹಾಗೂ ೪ ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ತಿಳಿಸಿದರು.

ಈ ದಿನಾಂಕಗಳಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆುಂವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಜರಿರುತ್ತಾರೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಕೈಬಿಡುವುದು, ತಿದ್ದುಪಡಿ ಮತ್ತು ಸ್ಥಳಾಂತರ ಸಂಬಂಧ ಅರ್ಜಿ ಸಲ್ಲಿಸಬಹುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಸಿದ್ಧತೆ ಕಾರ್ಯವನ್ನು ಮಹತ್ವದ್ದೆಂದು ಪರಿಗಣಿಸಲಾಗಿದೆ. ಅರ್ಹ ಮತದಾರರು ಮತದಾನದಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ, ಶೇ.೧೦೦ ರಷ್ಟು ದೋಷರಹಿತ ಮತದಾರರ ಪಟ್ಟಿ ತಯಾರಿಕೆಗೆ ಪೂರ್ವಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದರು.

ಪಟ್ಟಿ ಪರಿಷ್ಕರಣೆ ಸಂಬಂಧ ನ.೯ ರಿಂದ ಡಿ.೮ ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಡಿ.೨೬ ರಂದು ಇವುಗಳನ್ನು ಇತ್ಯರ್ಥ ಮಾಡಲಾಗುವುದು. ಅಂತಿಮ ಮತದಾರರ ಪಟ್ಟಿಯನ್ನು ಜ.೫ ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ತ್ರೈಮಾಸಿಕವಾಗಿ ವರ್ಷಕ್ಕೆ ೪ ಅವಕಾಶಗಳನ್ನು ನೀಡಿ, ಜ.೧, ಏ.೧, ಜು.೧, ಅ.೧ ಅನ್ನು ಅರ್ಹತಾ ದಿನಾಂಕವೆಂದು ಪರಿಗಣಿಸಲಾಗಿದೆ. ಈ ದಿನಾಂಕಗಳಂದು ಅಥವಾ ಅದಕ್ಕೂ ಮೊದಲು ೧೮ ವರ್ಷ ಪೂರೈಸಿದ್ದರೆ ಹಾಗೂ ೧೭ ವರ್ಷ ತುಂಬಿರುವ ಯುವ ಮತದಾರರನ್ನು ಪಟ್ಟಿಗೆ ಸೇರಿಸಲು ಅರ್ಜಿ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಬಿ.ಎಲ್.ಒಗಳ ಮೂಲಕ ಅರ್ಜಿ ಅಥವಾ (ವಿಎಚ್‌ಎ) ಆ್ಯಪ್ ಮೂಲಕ ನೋಂದಾಯಿಸಬಹುದು ಎಂದು ತಿಳಿಸಿದರು.

ನ.೯ ರಿಂದ ಡಿ.೮ ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆಮನೆ ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಅವರು ಮನೆ ಮನೆ ಭೇಟಿ ನೀಡಿದಾಗ ಕರಡು ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರುಗಳನ್ನು ಓದಿ ಸಂಬಂಧಿಸಿದ ಮತದಾರರಿಗೆ ತಿಳಿಸುವರು. ಏನಾದರೂ ಲೋಪಗಳು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸಲಾಗುತ್ತದೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಧಾರ್ ಜೋಡಣೆಯಲ್ಲಿ ಶೇ.೭೬.೩೬ ಪ್ರಗತಿ
ಮತದಾರರ ಪಟ್ಟಿಗೆ ಆಧಾರ ಸಂಖ್ಯೆ ಜೋಡಿಸುವ ಕಾರ್ಯ ಆ.೧ ರಿಂದ ಚಾಲನೆಯಲ್ಲಿದೆ. ಜಿಲ್ಲೆಯ ೮,೩೫,೮೫೪ ಮತದಾರರ ಪೈಕಿ ೬,೩೮,೨೮೨ ಮತದಾರರ ಆಧಾರ ಸಂಖ್ಯೆಯನ್ನು ಪಟ್ಟಿಗೆ ಸೇರಿಸಲಾಗಿದ್ದು, ಶೇ.೭೬.೩೬ ರಷ್ಟು ಪ್ರಗತಿಯಾಗಿದೆ. ಉಳಿದ ೧೯೭೫೭೨ ಮತದಾರರ ಗುರುತಿಗೆ ಆಧಾರ ಸಂಖ್ಯೆ ಜೋಡಣೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ೮,೩೫,೮೫೪ ಮತದಾರರು
ಹೊಸದಾಗಿ ಪ್ರಕಟಿಸಲಾದ ಪಟ್ಟಿ ಪ್ರಕಾರ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ೮೩೫೮೫೪ ಮತದಾರರಿದ್ದಾರೆ. ಇವರಲ್ಲಿ ೪೧೪೪೮೧ ಪುರುಷ, ೪೨೦೩೨೬ ಮಹಿಳಾ, ೬೫ ಇತರೆ ಮತದಾರರಿದ್ದಾರೆ. ಹನೂರು ಕ್ಷೇತ್ರದಲ್ಲಿ ಒಟ್ಟು ೨೧೨೩೪೪ ಮತದಾರರಿದ್ದು, ಇವರಲ್ಲಿ ೧೦೭೬೦೮ ಪುರುಷ, ೧೦೪೪೬೮ ಮಹಿಳಾ, ಇತರೆ ೧೫ ಮತದಾರರಿದ್ದಾರೆ. ಕೊಳ್ಳೇಗಾಲ ಕ್ಷೇತ್ರದಲ್ಲಿ ಒಟ್ಟು ೨೧೧೩೭೫ ಮತದಾರರಿದ್ದು, ಇವರಲ್ಲಿ ೧೦೪೪೪೬ ಪುರುಷ, ೧೦೬೬೭೦ ಮಹಿಳಾ, ಇತರೆ ೧೮ ಮತದಾರರು ಇದ್ದಾರೆ. ಚಾ.ನಗರ ಕ್ಷೇತ್ರದಲ್ಲಿ ಒಟ್ಟು ೨೦೩೭೪೬ ಮತದಾರರರಿದ್ದು, ಇವರಲ್ಲಿ ೯೯೮೪೯ ಪುರುಷ, ೧೦೩೬೪೨ ಮಹಿಳಾ, ಇತರೆ ೧೬ ಮತದಾರರಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದಲ್ಲಿ ಒಟ್ಟು ೨೦೮೩೮೯ ಮತದಾರರಿದ್ದು, ೧೦೨೫೭೮ ಪುರುಷ, ೧೦೫೫೪೬ ಮಹಿಳಾ, ಇತರೆ ೧೬ ಮತದಾರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೯೮೨ ಮತಗಟ್ಟೆಗಳಿದ್ದು, ಹನೂರು ಕ್ಷೇತ್ರದಲ್ಲಿ ೨೫೩, ಕೊಳ್ಳೇಗಾಲ ಕ್ಷೇತ್ರದಲ್ಲಿ ೨೪೧, ಚಾ.ನಗರ ಕ್ಷೇತ್ರದಲ್ಲಿ ೨೩೯, ಗುಂಡ್ಲುಪೇಟೆ ಕ್ಷೇತ್ರದಲ್ಲಿ ೨೪೯ ಇವೆ. -ಡಿ.ಎಸ್.ರಮೇಶ್, ಜಿಲ್ಲಾಧಿಕಾರಿ

 

andolana

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

2 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

3 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

3 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

4 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

5 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

6 hours ago