ಮೈಸೂರು : ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ ಮಾಡಿರುವ ಪ್ರದೇಶಗಳು ಸುಮಾರು 2 ಕಿ.ಮೀ ವ್ಯಾಪ್ತಿಯಲ್ಲಿ ಇದೆ. ಬೆಳಿಗ್ಗೆ ಯೇ ನಮ್ಮ ಅರಣ್ಯ ಸಂರಕ್ಷಣಾಧಿಕಾರಿಗಳ ಬಳಿ ಮಾತನಾಡಿ 2 ರಿಂದ 3 ಕಿಮೀ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ಬಳಸಿ, ಚಿರತೆಗಳನ್ನು ಸೆರೆ ಹಿಡಿಯಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶ ನೀಡಿದ್ದು, ಗಡಿ ಪ್ರದೇಶದಲ್ಲಿ ವಿಶೇಷ ಕಾವಲುಗಾರರನ್ನು ನೇಮಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು, ಸಂಜೆ ಮೇಲೆ ಹೊರಗೆ ತೆರಳದಂತೆ ತಿಳಿಸುವುದು ಮಾಡಬೇಕು. ಗಡಿ ಪ್ರದೇಶದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಬಂದೂಕುಧಾರಿಗಳಾಗಿ ಕಾವಲು ಕಾಯಬೇಕು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲ. ಕೂಡಲೇ ಕ್ರಮಕೈಗೊಳ್ಳಲು ವಿಶೇಷ ತಂಡ ರಚಿಸಿ ಮೃತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಹೆಚ್ಚಿಸಲಾಗಿದ್ದು ಕೂಡಲೇ ಕುಟುಂಬದವರಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಖಂಡಿತವಾಗಿಯೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮೊನ್ನೆಯಷ್ಟೇ ಒಂದು ಚಿರತೆಯನ್ನು ಹಿಡಿಯಲಾಗಿದೆ. ಇದನ್ನೂ ಆದಷ್ಟು ಬೇಗ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು ಎಂದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…