ಮೈಸೂರು : ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ ಮಾಡಿರುವ ಪ್ರದೇಶಗಳು ಸುಮಾರು 2 ಕಿ.ಮೀ ವ್ಯಾಪ್ತಿಯಲ್ಲಿ ಇದೆ. ಬೆಳಿಗ್ಗೆ ಯೇ ನಮ್ಮ ಅರಣ್ಯ ಸಂರಕ್ಷಣಾಧಿಕಾರಿಗಳ ಬಳಿ ಮಾತನಾಡಿ 2 ರಿಂದ 3 ಕಿಮೀ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ಬಳಸಿ, ಚಿರತೆಗಳನ್ನು ಸೆರೆ ಹಿಡಿಯಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶ ನೀಡಿದ್ದು, ಗಡಿ ಪ್ರದೇಶದಲ್ಲಿ ವಿಶೇಷ ಕಾವಲುಗಾರರನ್ನು ನೇಮಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು, ಸಂಜೆ ಮೇಲೆ ಹೊರಗೆ ತೆರಳದಂತೆ ತಿಳಿಸುವುದು ಮಾಡಬೇಕು. ಗಡಿ ಪ್ರದೇಶದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಬಂದೂಕುಧಾರಿಗಳಾಗಿ ಕಾವಲು ಕಾಯಬೇಕು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲ. ಕೂಡಲೇ ಕ್ರಮಕೈಗೊಳ್ಳಲು ವಿಶೇಷ ತಂಡ ರಚಿಸಿ ಮೃತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಹೆಚ್ಚಿಸಲಾಗಿದ್ದು ಕೂಡಲೇ ಕುಟುಂಬದವರಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಖಂಡಿತವಾಗಿಯೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮೊನ್ನೆಯಷ್ಟೇ ಒಂದು ಚಿರತೆಯನ್ನು ಹಿಡಿಯಲಾಗಿದೆ. ಇದನ್ನೂ ಆದಷ್ಟು ಬೇಗ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…