ಮೈಸೂರು : ತೀವ್ರ 12 ವರ್ಷದ ಬಾಲಕನನ್ನು ಕೊಂಡಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ನಂಜನಗೂಡಿನ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಮತ್ತೊಂದು ಚಿರತೆ 12 ವರ್ಷದ ಮಗುವಿನ ಮೇಲೆ ದಾಳಿ ಮಾಡಿ ಇಂದು ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಚಿರತೆ ಕಳೆದ ಮೂರು ಬಾರಿ ದಾಳಿ ಮಾಡಿರುವ ಪ್ರದೇಶಗಳು ಸುಮಾರು 2 ಕಿ.ಮೀ ವ್ಯಾಪ್ತಿಯಲ್ಲಿ ಇದೆ. ಬೆಳಿಗ್ಗೆ ಯೇ ನಮ್ಮ ಅರಣ್ಯ ಸಂರಕ್ಷಣಾಧಿಕಾರಿಗಳ ಬಳಿ ಮಾತನಾಡಿ 2 ರಿಂದ 3 ಕಿಮೀ ವ್ಯಾಪ್ತಿಯಲ್ಲಿ ವಿಶೇಷ ಪಡೆಗಳನ್ನು ಬಳಸಿ, ಚಿರತೆಗಳನ್ನು ಸೆರೆ ಹಿಡಿಯಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಲು ಆದೇಶ ನೀಡಿದ್ದು, ಗಡಿ ಪ್ರದೇಶದಲ್ಲಿ ವಿಶೇಷ ಕಾವಲುಗಾರರನ್ನು ನೇಮಿಸಿ, ಜನರಲ್ಲಿ ಜಾಗೃತಿ ಮೂಡಿಸುವುದು, ಸಂಜೆ ಮೇಲೆ ಹೊರಗೆ ತೆರಳದಂತೆ ತಿಳಿಸುವುದು ಮಾಡಬೇಕು. ಗಡಿ ಪ್ರದೇಶದಲ್ಲಿ ಅರಣ್ಯ ಮತ್ತು ಪೊಲೀಸ್ ಇಲಾಖೆಯವರು ಬಂದೂಕುಧಾರಿಗಳಾಗಿ ಕಾವಲು ಕಾಯಬೇಕು. ಇನ್ನು ಹೆಚ್ಚಿನ ಬಳಿ ನೀಡಲು ಸಾಧ್ಯವಿಲ್ಲ. ಕೂಡಲೇ ಕ್ರಮಕೈಗೊಳ್ಳಲು ವಿಶೇಷ ತಂಡ ರಚಿಸಿ ಮೃತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಹೆಚ್ಚಿಸಲಾಗಿದ್ದು ಕೂಡಲೇ ಕುಟುಂಬದವರಿಗೆ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಖಂಡಿತವಾಗಿಯೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಮೊನ್ನೆಯಷ್ಟೇ ಒಂದು ಚಿರತೆಯನ್ನು ಹಿಡಿಯಲಾಗಿದೆ. ಇದನ್ನೂ ಆದಷ್ಟು ಬೇಗ ಸೆರೆ ಹಿಡಿಯಲು ಕ್ರಮ ವಹಿಸಲಾಗುವುದು ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…