ಸಂಸದ ಪ್ರತಾಪಸಿಂಹಗೆ ಮುಖಂಡ ಪ್ರದೀಪ್ಕುಮಾರ್ ಸಲಹೆ
ಮೈಸೂರು: ಟಿಪ್ಪು ರೈಲಿನ ಹೆಸರು ನಾನೇ ಬದಲಿಸಿದ್ದೇನೆ ಎನ್ನುವ ಅಹಂಕಾರದ ಮಾತುಗಳನ್ನು ಆಡುವುದು ಬಿಡಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಪಾಲಿಕೆ ಸದಸ್ಯ ಎಂ.ಪ್ರದೀಪ್ಕುಮಾರ್ ಸಂಸದ ಪ್ರತಾಪಸಿಂಹ ಅವರಿಗೆ ಸಲಹೆ ನೀಡಿದ್ದಾರೆ.
ಬಾರ್ ಮುಂದೆ ನಿಂತು ಮಾತನಾಡುವವರ ರೀತಿಯಲ್ಲಿ ನೀವು ಮಾತನಾಡುತ್ತೀದ್ದೀರಿ. ಮೈಸೂರಿನ ಸಂಸದರಾದಿ ಎರಡು ಬಾರಿ ಆಕಸ್ಮಿಕವಾಗಿ ಆಯ್ಕೆಯಾದ ನಿಮ್ಮನ್ನು ಜನ ಸಹಿಸಿಕೊಂಡಿದ್ದಾರೆ. ನೀವು ಸಮಾಜಗಳ ನಡುವೆ ಅಶಾಂತಿ ಉಂಟು ಮಾಡುತ್ತಿರುವ ಹೇಳಿಕೆಯನ್ನು ಪ್ರತಿದಿನ ನೀಡುತ್ತಿದ್ದೀರಿ. ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದ ಮೈಸೂರಿನಲ್ಲಿ ಸಾಮರಸ್ಯ ಕದಡುವ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ.
ಮೈಸೂರಿನ ಒಡೆಯರ್ ಅವರ ಬಗ್ಗೆ ಎಲ್ಲರಿಗೂ ಗೌರವವಿದೆ. ಅವರ ಹೆಸರನ್ನು ಒಂದು ರೈಲಿಗೆ ಸೀಮಿತ ಮಾಡುವ ಬದಲು ರೈಲ್ವೆ ನಿಲ್ದಾಣಕ್ಕೆ ಇಡುವಂತೆ ನೋಡಿಕೊಳ್ಳಿ. ಅದನ್ನು ಬಿಟ್ಟು ದಿನ ಬೆಳಗಾದರೆ ಟಿಪ್ಪು ಹೆಸರು ಪಠಿಸುತ್ತಾ ಜನರ ಭಾವನೆ ಕೆರಳಿಸುತ್ತೀದ್ದೀರಿ ಎಂದು ಟೀಕಿಸಿದ್ದಾರೆ.
ಮೈಸೂರು ಹೊರ ವರ್ತುಲ ರಸ್ತೆಗೆ ಎಲ್ಇಡಿ ದೀಪ ಹಾಕಿಸುವುದು ಸೇರಿ ಹಲವು ಅಭಿವೃದ್ದಿ ಚಟುವಟಿಕೆಗಳನ್ನು ಮಾಡುತ್ತೀದ್ದೀರಿ. ಅದನ್ನು ಸರಿಯಾಗಿ ಮಾಡಿ ಎಂದು ಪ್ರದೀಪ್ ಸಲಹೆ ನೀಡಿದ್ದಾರೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…